ಪುತ್ತೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಗಡಿಪಾರು ನೋಟೀಸ್ ಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಪುತ್ತೂರು ಉಪವಿಭಾಗ ಅಧಿಕಾರಿಗಳ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ.
ಅರುಣ್ ಕುಮಾರ್ ಪುತ್ತಿಲ ಅವರನ್ನು ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ನೋಟಿಸ್ ನೀಡಿ ಜೂನ್ 6ರಂದು ಪುತ್ತೂರು ಉಪ ವಿಭಾಗಾಧಿಕಾರಿ ಮುಂದೆ ಈ ಬಗ್ಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಇದರಂತೆ, ಅರುಣ್ ಪುತ್ತಿಲ ಪರವಾಗಿ ವಕೀಲ ನರಸಿಂಹ ಪ್ರಸಾದ್ ಹಾಜರಾಗಿ ವಾದ ಮಂಡಿಸಿದ್ದರು.
ಉಪವಿಭಾಗ ಅಧಿಕಾರಿಗಳ ನ್ಯಾಯಾಲಯದ ವಿಚಾರಣೆ ಸಂದರ್ಭದಲ್ಲಿ ಪೊಲೀಸರು ಹಾಜರಿದ್ದರೂ, ಸಮರ್ಪಕ ದಾಖಲೆಗಳನ್ನು ಒದಗಿಸದ ಕಾರಣ ಉಪ ವಿಭಾಗಾಧಿಕಾರಿ ಮುಂದಿನ ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ್ದು, ಪೊಲೀಸರು ಸಮರ್ಪಕ ದಾಖಲೆ ಒದಗಿಸುವಂತೆ ಆದೇಶ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ವೇಳೆ, ಇಂದು ಪುತ್ತೂರು ಉಪವಿಭಾಗದ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನೋಟಿಸ್ ಪಡೆದ 9 ಮಂದಿ ವಿಚಾರಣೆಗೆ ಹಾಜರಾಗಿದ್ದರು. ವಾರದ ಹಿಂದೆ ನೀಡಿದ್ದ ನೋಟೀಸಿನಲ್ಲಿ ತಾವು ಖುದ್ದಾಗಿ ಅಥವಾ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರಿಂದ ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲ ನರಸಿಂಹ ಪ್ರಸಾದ್ ಹಾಜರಾಗಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…