ಅರ್ಚಕರಿಗಿಲ್ಲದ ಸುಸಂಸ್ಕೃತ ಉಡುಗೆ ಕೇವಲ ಭಕ್ತರಿಗೆ ಮಾತ್ರ ಏಕೆ? : ತೃಪ್ತಿ ದೇಸಾಯಿ -Vishwanews24

Featured, ರಾಷ್ಟ್ರ ನ್ಯೂಸ್

ಅರ್ಚಕರಿಗಿಲ್ಲದ ಸುಸಂಸ್ಕೃತ ಉಡುಗೆ ಕೇವಲ ಭಕ್ತರಿಗೆ ಮಾತ್ರ ಏಕೆ? : ತೃಪ್ತಿ ದೇಸಾಯಿ -Vishwanews24

ಪುಣೆ: ಭಾರತೀಯ ಸಂಸ್ಕೃತಿಯಂತೆ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದು ಅರ್ಚಕರಿಗಿಲ್ಲದ ವಸ್ತ್ರ ಸಂಹಿತೆ ಭಕ್ತರಿಗೆ ಯಾಕೆ ಎಂದಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ತೃಪ್ತಿ ದೇಸಾಯಿ ಶಿರಡಿ ದೇವಾಲಯ ಇಂತಹ ಬೋರ್ಡ್ ಗಳನ್ನು ಹಾಕುವ ಮೂಲಕ ಭಕ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ . ದೇವಾಲಯ ಟ್ರಸ್ಟ್ ಈ ಫಲಕಗಳನ್ನು ತೆಗೆಯದಿದ್ದರೇ ನಾವೇ ಶಿರಡಿಗೆ ಹೋಗಿ ಫಲಕಗಳನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.

ದೇವಾಲಯಗಳ ಅರ್ಚಕರು ಮತ್ತು ಪೂಜಾರಿಗಳು ಅರ್ಧ ಬಟ್ಟೆ ಧರಿಸಿರುತ್ತಾರೆ, ಅವರಿಗಿಲ್ಲದ ವಸ್ತ್ರ ಸಂಹಿತೆ ಕೇವಲ ಭಕ್ತರಿಗೆ ಮಾತ್ರ ಏಕೆ ಎಂದು ಪ್ರಶ್ನಿಸಿದ್ದಾರೆ.ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ನ ಸಿಇಓ, ಇದೊಂದು ಮನವಿ ಅಷ್ಟೇ, ದೇವಾಲಯಕ್ಕೆ ಬರುವವರಿಗೆ ಯಾವುದೇ ವಸ್ತ್ರ ಸಂಹಿತೆ ನಿಗದಿ ಪಡಿಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವನಿಗಿಷ್ಟವಾದ ವಸ್ತ್ರ ಧರಿಸುವ ಹಕ್ಕು ನೀಡಿದೆ ಎಂದು ತೃಪ್ತಿ ದೇಸಾಯಿ ತಿಳಿಸಿದ್ದಾರೆ