ಪುಣೆ: ಭಾರತೀಯ ಸಂಸ್ಕೃತಿಯಂತೆ ವಸ್ತ್ರ ಧರಿಸಿ ಬರಬೇಕೆಂದು ಶಿರಡಿ ಸಾಯಿಬಾಬಾ ದೇವಾಲಯ ಟ್ರಸ್ಟ್ ಬೋರ್ಡ್ ಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಆಕ್ರೋಶ ವ್ಯಕ್ತ ಪಡಿಸಿದ್ದು ಅರ್ಚಕರಿಗಿಲ್ಲದ ವಸ್ತ್ರ ಸಂಹಿತೆ ಭಕ್ತರಿಗೆ ಯಾಕೆ ಎಂದಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ತೃಪ್ತಿ ದೇಸಾಯಿ ಶಿರಡಿ ದೇವಾಲಯ ಇಂತಹ ಬೋರ್ಡ್ ಗಳನ್ನು ಹಾಕುವ ಮೂಲಕ ಭಕ್ತರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ . ದೇವಾಲಯ ಟ್ರಸ್ಟ್ ಈ ಫಲಕಗಳನ್ನು ತೆಗೆಯದಿದ್ದರೇ ನಾವೇ ಶಿರಡಿಗೆ ಹೋಗಿ ಫಲಕಗಳನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.
ದೇವಾಲಯಗಳ ಅರ್ಚಕರು ಮತ್ತು ಪೂಜಾರಿಗಳು ಅರ್ಧ ಬಟ್ಟೆ ಧರಿಸಿರುತ್ತಾರೆ, ಅವರಿಗಿಲ್ಲದ ವಸ್ತ್ರ ಸಂಹಿತೆ ಕೇವಲ ಭಕ್ತರಿಗೆ ಮಾತ್ರ ಏಕೆ ಎಂದು ಪ್ರಶ್ನಿಸಿದ್ದಾರೆ.ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ನ ಸಿಇಓ, ಇದೊಂದು ಮನವಿ ಅಷ್ಟೇ, ದೇವಾಲಯಕ್ಕೆ ಬರುವವರಿಗೆ ಯಾವುದೇ ವಸ್ತ್ರ ಸಂಹಿತೆ ನಿಗದಿ ಪಡಿಸಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಅವನಿಗಿಷ್ಟವಾದ ವಸ್ತ್ರ ಧರಿಸುವ ಹಕ್ಕು ನೀಡಿದೆ ಎಂದು ತೃಪ್ತಿ ದೇಸಾಯಿ ತಿಳಿಸಿದ್ದಾರೆ
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…