ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯ ಹೊಸೂರು ರಸ್ತೆ ಬಳಿ ಡಿ.೨೭ ರಂದು ಇನ್ನೋವಾ ಕಾರಿನಲ್ಲಿ ಅರ್ಚನಾ ಎಂಬ ಮಹಿಳೆ ಬರುತ್ತಿದ್ದಾಗ ಕಾರನ್ನ ಅಡ್ಡಗಟ್ಟಿ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ
ಸಿಸಿ ಟಿವಿ ಆಧಾರದ ಮೇಲೆ ಈ ಕೊಲೆ ಪ್ರಕರಣ ತನಿಖೆ ಕೈಗೊಳ್ಳಲಾಗಿತ್ತು, ತನಿಖೆಯಲ್ಲಿ ಮುಖ್ಯವಾದ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆಯ ಸಂಪೂರ್ಣ ಮಾಹಿತಿ ಬೆಳಕಿಗೆ ಬಂದಿದೆ.ಅಸಲಿಗೆ ಇದೆಲ್ಲದರ ಮಾಸ್ಟರ್ ಮೈಂಡ್ ಪತಿ ಹಾಗೂ ಮಗಳೇ ಆಗಿದ್ದಾಳೆ.ಸದ್ಯ ಕೊಲೆ ಪ್ರಕರಣ ಸಂಬಂಧ ಇದೀಗ ಏಳು ಆರೋಪಿಗಳನ್ನ ಬಂಧಿಸಿದ್ದೇವೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಹೇಳಿಕೆ ನೀಡಿದ್ದಾರೆ.
ಆಸ್ತಿಯನ್ನ ಕಬಳಿಸಲು ಈ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ ಹಾಗೂ ಕೊಲೆ ಪ್ರಕರಣದಲ್ಲಿ ಕೃತ್ಯಕ್ಕೆ ಬಳಸಿದ್ದ ವಾಹನ ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಸದ್ಯ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದ್ದು, ಆರೋಪಿಗಳಾದ, ನವೀನ್ ಕುಮಾರ್( ಅರ್ಚನಾ ಮೂರನೆ ಪತಿ) , ನವೀನ್ ಸ್ನೇಹಿತರಾದ ಸಂತೋಷ್ , ಅನೂಪ್,ಆನಂದ್, ನರೇಂದ್ರ ಹಾಗೂ ಅರ್ಚನಾ ರೆಡ್ಡಿ ಮಗಳಾದ ದೀಪು ಬಂಧಿತ ಆರೋಪಿಗಳಾಗಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…