ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುವ ವೇಳೆ ಅವರು ಐಎಸ್ಐ ಪ್ರಮಾಣೀಕೃತ ಹೆಲ್ಮೆಟ್ ಧರಿಸಬೇಕು. ಆದರೆ, ಪೊಲೀಸರೇ ಮೋಟಾರು ಕಾಯಿದೆ ನಿಯಮದ ಉಲ್ಲಂಘನೆ ಮಾಡುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ನಿರ್ಧರಿಸಿದೆ.
“ವಾಹನ ಸವಾರರು ರಾಜ್ಯಾದ್ಯಂತ ಎಲ್ಲರೂ ಸ್ವಯಂಪ್ರೇರಿತವಾಗಿ ಕಾನೂನು ಪಾಲನೆ ಮಾಡಬೇಕು. ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಸವಾರರ ವಿರುದ್ಧವೂ ಕಡ್ಡಾಯವಾಗಿ ಕ್ರಮ ಜರುಗಿಸುವ ಬಗ್ಗೆ ಮತ್ತಷ್ಟು ನಿರ್ದೇಶನಗಳನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಹಿಂದೆ ಐಎಸ್ಐ ಗುರುತಿನ ಹೆಲ್ಮೆಟ್ ಕಡ್ಡಾಯ ನಿಯಮ ರಾಜ್ಯಾದ್ಯಂತ ಜಾರಿಯಾದರೂ ಭಿನ್ನ ಅಭಿ ಪ್ರಾಯಗಳು ಕೇಳಿಬಂದಿದ್ದವು. ಪೊಲೀಸ್ ಇಲಾಖೆಗೂ ತಾಂತ್ರಿಕ ಸಮಸ್ಯೆಗಳು ಉಂಟಾದವು. ಹೀಗಾಗಿ, ಪೂರ್ಣ ಪ್ರಮಾಣದ ಹೆಲ್ಮೆಟ್ ಕಡ್ಡಾಯ ಪಾಲನೆ ಹಳ್ಳ ಹಿಡಿದಿದೆ ಎಂದು ಹಿರಿಯ ಅಧಿಕಾರಿ ಹೇಳುತ್ತಾರೆ.
ಬೆಂಗಳೂರು ನಗರ ಸಂಚಾರ ಹೆಚ್ಚುವರಿ ಪೊಲೀಸ್ ಆಯುಕ್ತ ಡಾ.ಬಿ.ಆರ್ ರವಿಕಾಂತೇಗೌಡ ಅವರು, ಅರ್ಧ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ವಿರುದ್ಧವೂ ಮೋಟಾರು ಕಾಯಿದೆ ಅನ್ವಯ ಪ್ರಕರಣ ದಾಖಲಿಸಿ ದಂಡ ವಿಧಿಸುವಂತೆ ಸೂಚಿಸಿ ನಗರ ಸಂಚಾರ ಪೊಲೀಸರಿಗೆ ಆದೇಶಿಸಿದ್ದಾರೆ.
ಅರ್ಧ ಹೆಲ್ಮೆಟ್ ಧರಿಸುವವರಲ್ಲಿ ಪೊಲೀಸರು ಸೇರಿದ್ದಾರೆ. ಹೀಗಾಗಿ ಮೊದಲು ಇಲಾಖೆಯವರಿಗೆ ಅರಿವು ಮೂಡಿಸಬೇಕಿದೆ. ಆನಂತರ ಸಾರ್ವಜನಿಕರಿಗೆ ಹೇಳಬೇಕಿದೆ. ಈಗ ಟೋಪಿ ಆಕಾರದ ಹೆಲ್ಮೆಟ್ ಧರಿಸುವ ಪೊಲೀಸರು ಕಂಡು ಬಂದರೆ ತಕ್ಷಣವೇ ಕಾನೂನು ಕ್ರಮ ಜರುಗಿಸಲಾಗುತ್ತದೆ. ಇದರಲ್ಲಿ ಯಾವುದೇ ಮುಲಾಜು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…