ನವದೆಹಲಿ: ‘ಪಕ್ಷದಲ್ಲಿ ಮುಖಂಡರಿಗೆ ಪ್ರಮುಖ ಹುದ್ದೆ, ಜವಾಬ್ದಾರಿಯನ್ನು ನೀಡುವ ವೇಳೆ ಪಕ್ಷದ ತತ್ವ–ಸಿದ್ಧಾಂತದ ಬಗ್ಗೆ ಅವರಲ್ಲಿನ ಬದ್ಧತೆಯನ್ನು ಪರಿಶೀಲಿಸಬೇಕು’ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಗುರುವಾರ ಹೇಳಿದ್ದಾರೆ.
ಜಿತಿನ್ ಪ್ರಸಾದ್ ಅವರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮರುದಿನವೇ ಮೊಯಿಲಿ ಅವರಿಂದ ಈ ಅಭಿಪ್ರಾಯ ಹೊರಬಿದ್ದಿದೆ.
‘ಕಾಂಗ್ರೆಸ್ ಪಕ್ಷಕ್ಕೆ ‘ದೊಡ್ಡ ಶಸ್ತ್ರಚಿಕಿತ್ಸೆ’ಯ ಅಗತ್ಯವಿದೆ. ಕೇವಲ ವಂಶಪಾರಂಪರ್ಯವನ್ನು ಪರಿಗಣಿಸಿ ಮುಖಂಡರಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.
‘ಜಿತಿನ್ ಪ್ರಸಾದ್ ನೇತೃತ್ವದಲ್ಲಿಯೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಯಿತು. ಪಕ್ಷಕ್ಕೆ ಒಂದೇ ಒಂದು ಸ್ಥಾನ ಸಿಗಲಿಲ್ಲ. ಅವರು ಅಸಮರ್ಥರು ಎಂಬುದನ್ನು ಇದು ಸಾಬೀತುಪಡಿಸಿತ್ತು’ ಎಂದು ಹೇಳಿದ್ದಾರೆ.
‘ಜಿತಿನ್ ಪ್ರಸಾದ್ ಅವರಿಗೆ ಪಕ್ಷಕ್ಕಿಂತ ವೈಯಕ್ತಿಕ ಮಹತ್ವಾಕಾಂಕ್ಷೆಯೇ ಮುಖ್ಯವಾಗಿತ್ತು. ಪಕ್ಷದ ತತ್ವ–ಸಿದ್ಧಾಂತದ ಬಗೆಗಿನ ಇವರ ಬದ್ಧತೆ ಬಗ್ಗೆ ಮೊದಲಿನಿಂದಲೂ ಸಂಶಯ ಇತ್ತು’ ಎಂದೂ ಆರೋಪಿಸಿದರು.
‘ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು. ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ. ಪಕ್ಷದ ಮರುಸಂಘಟನೆಯಾಗಬೇಕು. ಪ್ರಮುಖ ಹುದ್ದೆಗಳಲ್ಲಿ ಸಮರ್ಥರನ್ನೇ ನೇಮಕ ಮಾಡಬೇಕು. ಪಕ್ಷವು ಆತ್ಮಾವಲೋಕನ ನಡೆಸಬೇಕು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಒಂದು ಪಾಠವಾಗಬೇಕು’ ’ ಎಂದೂ ಮೊಯಿಲಿ ಪ್ರತಿಪಾದಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…