Featured

ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು : ವೀರಪ್ಪ ಮೊಯಿಲಿ  – Vishwanews24

ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು : ವೀರಪ್ಪ ಮೊಯಿಲಿ

ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ..

ನವದೆಹಲಿ: ‘ಪಕ್ಷದಲ್ಲಿ ಮುಖಂಡರಿಗೆ ಪ್ರಮುಖ ಹುದ್ದೆ, ಜವಾಬ್ದಾರಿಯನ್ನು ನೀಡುವ ವೇಳೆ ಪಕ್ಷದ ತತ್ವ–ಸಿದ್ಧಾಂತದ ಬಗ್ಗೆ ಅವರಲ್ಲಿನ ಬದ್ಧತೆಯನ್ನು ಪರಿಶೀಲಿಸಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಗುರುವಾರ ಹೇಳಿದ್ದಾರೆ.

ಜಿತಿನ್ ಪ್ರಸಾದ್ ಅವರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮರುದಿನವೇ ಮೊಯಿಲಿ ಅವರಿಂದ ಈ ಅಭಿಪ್ರಾಯ ಹೊರಬಿದ್ದಿದೆ.

‘ಕಾಂಗ್ರೆಸ್‌ ಪಕ್ಷಕ್ಕೆ ‘ದೊಡ್ಡ ಶಸ್ತ್ರಚಿಕಿತ್ಸೆ’ಯ ಅಗತ್ಯವಿದೆ. ಕೇವಲ ವಂಶಪಾರಂಪರ್ಯವನ್ನು ಪರಿಗಣಿಸಿ ಮುಖಂಡರಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ನೇತೃತ್ವದಲ್ಲಿಯೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಯಿತು. ಪಕ್ಷಕ್ಕೆ ಒಂದೇ ಒಂದು ಸ್ಥಾನ ಸಿಗಲಿಲ್ಲ. ಅವರು ಅಸಮರ್ಥರು ಎಂಬುದನ್ನು ಇದು ಸಾಬೀತುಪಡಿಸಿತ್ತು’ ಎಂದು ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ಅವರಿಗೆ ಪಕ್ಷಕ್ಕಿಂತ ವೈಯಕ್ತಿಕ ಮಹತ್ವಾಕಾಂಕ್ಷೆಯೇ ಮುಖ್ಯವಾಗಿತ್ತು. ಪಕ್ಷದ ತತ್ವ–ಸಿದ್ಧಾಂತದ ಬಗೆಗಿನ ಇವರ ಬದ್ಧತೆ ಬಗ್ಗೆ ಮೊದಲಿನಿಂದಲೂ ಸಂಶಯ ಇತ್ತು’ ಎಂದೂ ಆರೋಪಿಸಿದರು.

‘ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು. ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ. ಪಕ್ಷದ ಮರುಸಂಘಟನೆಯಾಗಬೇಕು. ಪ್ರಮುಖ ಹುದ್ದೆಗಳಲ್ಲಿ ಸಮರ್ಥರನ್ನೇ ನೇಮಕ ಮಾಡಬೇಕು. ಪಕ್ಷವು ಆತ್ಮಾವಲೋಕನ ನಡೆಸಬೇಕು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಒಂದು ಪಾಠವಾಗಬೇಕು’ ’ ಎಂದೂ ಮೊಯಿಲಿ ಪ್ರತಿಪಾದಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago