Featured

ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು : ವೀರಪ್ಪ ಮೊಯಿಲಿ  – Vishwanews24

ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು : ವೀರಪ್ಪ ಮೊಯಿಲಿ

ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ..

ನವದೆಹಲಿ: ‘ಪಕ್ಷದಲ್ಲಿ ಮುಖಂಡರಿಗೆ ಪ್ರಮುಖ ಹುದ್ದೆ, ಜವಾಬ್ದಾರಿಯನ್ನು ನೀಡುವ ವೇಳೆ ಪಕ್ಷದ ತತ್ವ–ಸಿದ್ಧಾಂತದ ಬಗ್ಗೆ ಅವರಲ್ಲಿನ ಬದ್ಧತೆಯನ್ನು ಪರಿಶೀಲಿಸಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಗುರುವಾರ ಹೇಳಿದ್ದಾರೆ.

ಜಿತಿನ್ ಪ್ರಸಾದ್ ಅವರು ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮರುದಿನವೇ ಮೊಯಿಲಿ ಅವರಿಂದ ಈ ಅಭಿಪ್ರಾಯ ಹೊರಬಿದ್ದಿದೆ.

‘ಕಾಂಗ್ರೆಸ್‌ ಪಕ್ಷಕ್ಕೆ ‘ದೊಡ್ಡ ಶಸ್ತ್ರಚಿಕಿತ್ಸೆ’ಯ ಅಗತ್ಯವಿದೆ. ಕೇವಲ ವಂಶಪಾರಂಪರ್ಯವನ್ನು ಪರಿಗಣಿಸಿ ಮುಖಂಡರಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು’ ಎಂದು ಅವರು ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ನೇತೃತ್ವದಲ್ಲಿಯೇ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯನ್ನು ಎದುರಿಸಲಾಯಿತು. ಪಕ್ಷಕ್ಕೆ ಒಂದೇ ಒಂದು ಸ್ಥಾನ ಸಿಗಲಿಲ್ಲ. ಅವರು ಅಸಮರ್ಥರು ಎಂಬುದನ್ನು ಇದು ಸಾಬೀತುಪಡಿಸಿತ್ತು’ ಎಂದು ಹೇಳಿದ್ದಾರೆ.

‘ಜಿತಿನ್‌ ಪ್ರಸಾದ್‌ ಅವರಿಗೆ ಪಕ್ಷಕ್ಕಿಂತ ವೈಯಕ್ತಿಕ ಮಹತ್ವಾಕಾಂಕ್ಷೆಯೇ ಮುಖ್ಯವಾಗಿತ್ತು. ಪಕ್ಷದ ತತ್ವ–ಸಿದ್ಧಾಂತದ ಬಗೆಗಿನ ಇವರ ಬದ್ಧತೆ ಬಗ್ಗೆ ಮೊದಲಿನಿಂದಲೂ ಸಂಶಯ ಇತ್ತು’ ಎಂದೂ ಆರೋಪಿಸಿದರು.

‘ಅರ್ಹತೆ ಇಲ್ಲದವರನ್ನು ನಾಯಕರನ್ನಾಗಿ ಮಾಡಬಾರದು. ಪಕ್ಷದಲ್ಲಿರುವ ಮುಖಂಡರ ಕುರಿತು ವರಿಷ್ಠರು ಸಮರ್ಪಕ ಮೌಲ್ಯಮಾಪನ ಮಾಡುವುದು ಅಗತ್ಯ. ಪಕ್ಷದ ಮರುಸಂಘಟನೆಯಾಗಬೇಕು. ಪ್ರಮುಖ ಹುದ್ದೆಗಳಲ್ಲಿ ಸಮರ್ಥರನ್ನೇ ನೇಮಕ ಮಾಡಬೇಕು. ಪಕ್ಷವು ಆತ್ಮಾವಲೋಕನ ನಡೆಸಬೇಕು. ಪಕ್ಷದ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಈ ಬೆಳವಣಿಗೆ ಒಂದು ಪಾಠವಾಗಬೇಕು’ ’ ಎಂದೂ ಮೊಯಿಲಿ ಪ್ರತಿಪಾದಿಸಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

4 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago