ಕುಂದಾಪುರ: ತ್ರಾಸಿ ಅರಬ್ಬಿ ಸಮುದ್ರದಲ್ಲಿ ಶನಿವಾರ ಸಂಜೆ ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ಬೋಟ್ ರೈಡರ್ ಮೃತದೇಹ ಸೋಮವಾರ ನಸುಕಿನ ಜಾವ ತ್ರಾಸಿ ಸಮೀಪದ ಹೊಸಪೇಟೆ ಕಡಲತೀರದಲ್ಲಿ ಪತ್ತೆಯಾಗಿದೆ.
ಬೋಟ್ ರೈಡ್ ನಡೆಸುತ್ತಿದ್ದ ರೈಡರ್ ಪ್ರಸ್ತುತ ತ್ರಾಸಿಯಲ್ಲಿ ನೆಲೆಸಿದ್ದು, ಮೂಲತಃ ಕಾರವಾರ ಜಿಲ್ಲೆಯ ಮುರ್ಡೇಶ್ವರದ ರೋಹಿದಾಸ್ ಅಲಿಯಾಸ್ ರವಿ (41) ಮೃತ ದುರ್ದೈವಿ.
ತ್ರಾಸಿ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪದ ಅನುಗ್ರಹ ಬಾರ್ ಸಮೀಪ ಅರಬ್ಬಿ ಸಮುದ್ರದ ಕಡಲ ಕಿನಾರೆಯ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸಮುದ್ರದ ಮೋಜನ್ನು ತೋರಿಸಲು ಖಾಸಗಿ ಟೂರಿಸ್ಟ್ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಶನಿವಾರ ಸಂಜೆ ಬೆಂಗಳೂರು ಮೂಲದ ಪ್ರಶಾಂತ್ (25 ) ಎನ್ನುವ ಪ್ರವಾಸಿಗ ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬಂದ ಭಾರಿ ಗಾತ್ರದ ಅಲೆಯಲ್ಲಿ ಬೋಟ್ ಆಯಾ ತಪ್ಪಿ ಪಲ್ಟಿ ಆಗಿತ್ತು. ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದಿದ್ದರು. ಘಟನೆ ವೇಳೆ ಲೈಫ್ ಜಾಕೆಟ್ ಧರಿಸಿದ್ದರಿಂದ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದು, ಜಾಕೆಟ್ ಧರಿಸಿದ ರೈಡರ್ ನೀರಿನಲ್ಲಿ ಕೊಚ್ಚಿ ಹೋಗಿದ್ದರು.
ನಾಪತ್ತೆಯಾದ ರೋಹಿದಾಸ್ ಅವರ ಪತ್ತೆಗಾಗಿ ಸತತ ಶೋಧ ಕಾರ್ಯ ನಡೆಸಲಾಗಿತ್ತು. ಶನಿವಾರ ಸಂಜೆ ಹಾಗೂ ಭಾನುವಾರ ದಿನವಿಡೀ ಗಂಗೊಳ್ಳಿ ಪೊಲೀಸ್ ಠಾಣೆ, ಕರಾವಳಿ ಪೊಲೀಸ್ ಕಾವಲು ಪಡೆಯ ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು, ಈಜುಪಟು ದಿನೇಶ್ ಖಾರ್ವಿ ನೇತೃತ್ವದ ತಂಡ ಶೋಧ ಕಾರ್ಯದಲ್ಲಿ ನಿರತರಾಗಿದ್ದು, ಸೋಮವಾರ ಮುಂಜಾನೆ ಕಾರ್ಯಾಚರಣೆಗಿಳಿದ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದೆ.
ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…