Featured

ಕುಂದಾಪುರ: ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್‌ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ – vishwanews24

ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್‌ ಪಲ್ಟಿಯಾಗಿ ನಾಪತ್ತೆಯಾಗಿದ್ದ ರೈಡರ್ ಮೃತದೇಹ ಪತ್ತೆ

ಕುಂದಾಪುರ: ತ್ರಾಸಿ ಅರಬ್ಬಿ ಸಮುದ್ರದಲ್ಲಿ ಶನಿವಾರ ಸಂಜೆ ಅಲೆಗಳ ಅಬ್ಬರಕ್ಕೆ ಟೂರಿಸ್ಟ್ ಬೋಟ್ ಪಲ್ಟಿಯಾಗಿ ನಾಪತ್ತೆಯಾಗಿದ್ದ ಬೋಟ್ ರೈಡರ್ ಮೃತದೇಹ ಸೋಮವಾರ ನಸುಕಿನ ಜಾವ ತ್ರಾಸಿ‌ ಸಮೀಪದ‌ ಹೊಸಪೇಟೆ ಕಡಲತೀರದಲ್ಲಿ ಪತ್ತೆಯಾಗಿದೆ‌.

ಬೋಟ್ ರೈಡ್ ನಡೆಸುತ್ತಿದ್ದ ರೈಡರ್ ಪ್ರಸ್ತುತ ತ್ರಾಸಿಯಲ್ಲಿ ನೆಲೆಸಿದ್ದು, ಮೂಲತಃ ಕಾರವಾರ ಜಿಲ್ಲೆಯ ಮುರ್ಡೇಶ್ವರದ ರೋಹಿದಾಸ್ ಅಲಿಯಾಸ್ ರವಿ (41) ಮೃತ ದುರ್ದೈವಿ.

ತ್ರಾಸಿ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪದ ಅನುಗ್ರಹ ಬಾರ್ ಸಮೀಪ ಅರಬ್ಬಿ ಸಮುದ್ರದ ಕಡಲ ಕಿನಾರೆಯ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಸಮುದ್ರದ ಮೋಜನ್ನು ತೋರಿಸಲು ಖಾಸಗಿ ಟೂರಿಸ್ಟ್ ಬೋಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಶನಿವಾರ ಸಂಜೆ ಬೆಂಗಳೂರು ಮೂಲದ ಪ್ರಶಾಂತ್ (25 ) ಎನ್ನುವ ಪ್ರವಾಸಿಗ ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಆಕಸ್ಮಿಕವಾಗಿ ಬಂದ ಭಾರಿ ಗಾತ್ರದ ಅಲೆಯಲ್ಲಿ ಬೋಟ್ ಆಯಾ ತಪ್ಪಿ ಪಲ್ಟಿ ಆಗಿತ್ತು. ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದಿದ್ದರು. ಘಟನೆ ವೇಳೆ ಲೈಫ್ ಜಾಕೆಟ್ ಧರಿಸಿದ್ದರಿಂದ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದು, ಜಾಕೆಟ್ ಧರಿಸಿದ ರೈಡರ್ ನೀರಿನಲ್ಲಿ ಕೊಚ್ಚಿ ಹೋಗಿದ್ದರು.

ನಾಪತ್ತೆಯಾದ ರೋಹಿದಾಸ್ ಅವರ ಪತ್ತೆಗಾಗಿ ಸತತ ಶೋಧ ಕಾರ್ಯ ನಡೆಸಲಾಗಿತ್ತು. ಶನಿವಾರ ಸಂಜೆ ಹಾಗೂ ಭಾನುವಾರ ದಿನವಿಡೀ ಗಂಗೊಳ್ಳಿ ಪೊಲೀಸ್ ಠಾಣೆ, ಕರಾವಳಿ ಪೊಲೀಸ್ ಕಾವಲು ಪಡೆಯ ಪೊಲೀಸರು ಹಾಗೂ ಸ್ಥಳೀಯ ಮೀನುಗಾರರು, ಈಜುಪಟು ದಿನೇಶ್ ಖಾರ್ವಿ ನೇತೃತ್ವದ ತಂಡ ಶೋಧ ಕಾರ್ಯದಲ್ಲಿ ನಿರತರಾಗಿದ್ದು, ಸೋಮವಾರ ಮುಂಜಾನೆ ಕಾರ್ಯಾಚರಣೆಗಿಳಿದ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago