Featured

ಅಲ್ಪಸಂಖ್ಯಾತರ ಶಾದಿ ಮಹಲ್ ಯೋಜನೆ ಬಿಟ್ಟು ಉಳಿದ ಎಲ್ಲಾ ಯೋಜನೆ ಮುಂದುವರಿಕೆ : ಬೊಮ್ಮಾಯಿ – Vishwanews24

ಅಲ್ಪಸಂಖ್ಯಾತರ ಶಾದಿ ಮಹಲ್ ಯೋಜನೆ ಬಿಟ್ಟು ಉಳಿದ ಎಲ್ಲಾ ಯೋಜನೆ ಮುಂದುವರಿಕೆ : ಬೊಮ್ಮಾಯಿ

ಬೆಂಗಳೂರು: ಶಾದಿ ಮಹಲ್ ಯೋಜನೆ ಬಿಟ್ಟು ಉಳಿದ ಎಲ್ಲಾ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ಮುಂದುವರಿಸುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಶೂನ್ಯವೇಳೆ ಕಾಂಗ್ರೆಸ್‍ನ ಸಿಎಂ ಇಬ್ರಾಹಿಂ ಪ್ರಶ್ನೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು, ಅಲ್ಪಸಂಖ್ಯಾತರ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ತಿಳಿಸಿದರು.

ಅಲ್ಪಸಂಖ್ಯಾತರಿಗೆ ನೀಡಿದ್ದ 77 ಯೋಜನೆಗಳಲ್ಲಿ ಈಗ 29 ಯೋಜನೆ ಮಾತ್ರ ಉಳಿದಿವೆ. ಉಳಿದ ಯೋಜನೆಗಳನ್ನು ಸರ್ಕಾರ ರದ್ದು ಮಾಡಿದೆ. ಗಂಗಾ ಕಲ್ಯಾಣ ಯೋಜನೆ ರದ್ದು ಮಾಡಲಾಗಿದೆ. ಪಿಹೆಚ್.ಡಿ ವಿದ್ಯಾರ್ಥಿಗಳಿಗೆ ಸಹಾಯ ಧನ 25 ಸಾವಿರ ನೀಡುತ್ತಿದ್ದರು. ಆದರೆ ಈಗ ಅದನ್ನು ನಿಲ್ಲಿಸಿದ್ದಾರೆ.

ಹಣ್ಣು ವ್ಯಾಪಾರಿಗಳಿಗೆ ಕೊಡುತ್ತಿದ್ದ ಲೋನ್ ಕೂಡಾ ನಿಲ್ಲಿಸಲಾಗಿದೆ. ದೇವಸ್ಥಾನದಲ್ಲಿ ಅಂಗಡಿ ಇಡಲು ಈಗ ನಿಷೇಧ ಮಾಡಲಾಗಿದೆ. ನಾವು ಬಡವರು ಯೋಜನೆಗಳನ್ನು ಸರ್ಕಾರ ಮುಂದುವರಿಸಬೇಕು ಎಂದು ಸಿಎಂ ಇಬ್ರಾಹಿಂ ಮನವಿ ಮಾಡಿದರು.

ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಶಾದಿ ಮಹಲ್ ಯೋಜನೆ ಬಿಟ್ಟು ಇನ್ಯಾವುದೇ ಯೋಜನೆ ನಾವು ನಿಲ್ಲಿಸೊಲ್ಲ ಎಂದು ಭರವಸೆ ನೀಡಿದರು. ಗಂಗಾ ಕಲ್ಯಾಣ ಯೋಜನೆ ನಿಲ್ಲಿಸಿಲ್ಲ. ಪಿಹೆಚ್.ಡಿ ವಿದ್ಯಾರ್ಥಿಗಳಿಗೆ ಅನುದಾನ ಮುಂದುವರಿಸುತ್ತೇವೆ. ಅರಿವು ಯೋಜನೆಗೆ ಹೆಚ್ಚು ಅನುದಾನ ನೀಡಿದ್ದೇನೆ. ಜಿಲ್ಲೆಗೊಂದು ಅಬ್ದುಲ್ ಕಲಾಂ ಶಾಲೆ ಅಭಿವೃದ್ಧಿ ಮಾಡುತ್ತಿದ್ದೇವೆ. ಸಿಬಿಎಸ್‍ಇ ಕೋರ್ಸ್ ಪ್ರಾರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.

50 ಸಾವಿರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ನೀಡಲು 110 ಕೋಟಿ ರೂ. ಹಣ ಇಟ್ಟಿದ್ದೇನೆ. ಅಲ್ಪಸಂಖ್ಯಾತರ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಹೆಚ್ಚಳ ಮಾಡಲಾಗಿದೆ. ಮೈನಾರಿಟಿ ಕಾಲೋನಿ ಅಭಿವೃದ್ಧಿಯನ್ನು ಸ್ಲಂ ಬೋರ್ಡ್ ಮೂಲಕ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಅಲ್ಪಸಂಖ್ಯಾತ ಅಭಿವೃದ್ಧಿಗೆ ಸರ್ಕಾರ ಅನೇಕ ಕಾರ್ಯಕ್ರಮ ಜಾರಿ ಮಾಡಿದೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

21 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

21 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

22 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

22 hours ago