ಅಲ್ಪಸಂಖ್ಯಾತರ ಸಾಲ ಸೌಲಭ್ಯ :ಅರ್ಜಿ ಆಹ್ವಾನ – Vishwanews24
ಅಲ್ಪಸಂಖ್ಯಾತರ ಸಾಲ ಸೌಲಭ್ಯ :ಅರ್ಜಿ ಆಹ್ವಾನ – Vishwanews24
ಉಡುಪಿ: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಅಲ್ಪಸಂಖ್ಯಾತ ಜನಾಂಗದವರಿ0ದ ಪ್ರಸಕ್ತ ಸಾಲಿನಲ್ಲಿ ಶ್ರಮ ಶಕ್ತಿ, ಸ್ವಯಂ ಉದ್ಯೋಗ, ಟ್ಯಾಕ್ಸಿ ಅಥವಾ ಗೂಡ್ಸ್ ಅಥವಾ ಆಟೋರಿಕ್ಷಾ ವಾಹನ ಖರೀದಿ ಯೋಜನೆಗಳ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಇಲಾಖಾ ವೆಬ್ಸೈಟ್ https://kmdconline.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಹಾಯವಾಣಿ ಸಂಖ್ಯೆ :8277799990, ಜಿಲ್ಲಾ ಕಚೇರಿ ದೂ. ಸಂ: 0820-2574990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 0828-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
07-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ 7022865313 -Vishwanews24
