ಕಾಂತಾರ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದೆ. ದೈವಾರಾಧನೆ ಕುರಿತು ಚಿತ್ರದಲ್ಲಿ ಅದ್ಬುತವಾಗಿ ತೋರಿಸಲಾಗಿದೆ. ಈ ಸಿನಿಮಾ ಸಕ್ಸಸ್ ಆದ ಬಳಿಕ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ.
ಇದೀಗ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದೈವದ ಹೆಸರಲ್ಲಿ ಅನೇಕರು ಹಣ ಮಾಡಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್ಗಳು ಹರಿದಾಡುತ್ತಿದೆ. ಅಂಥವರಿಗೆ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಮೈಸೂರು ಭಾಗದ ಜನರು ದೈವನಂಬಿಕೆಗಳನ್ನು ಮುರಿದು, ಪ್ರಚಾರಕ್ಕಾಗಿ, ದುಡ್ಡು ಮಾಡುವುದಕ್ಕಾಗಿ ಅಲ್ಲಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ.
ದುಡ್ಡು ಸಿಗುತ್ತದೆ ಎಂಬ ಕಾರಣಕ್ಕಾಗಿ ಅಲ್ಲಿ ಹೋಗಿ ನೇಮ ಕಟ್ಟುವವರಿಗೆ, ತಾಸೆ ಬ್ಯಾಂಡ್ ಸೆಟ್ನವರಿಗೆ, ಮಧ್ಯಸ್ಥ, ಮುಕ್ಕಾಲ್ದಿ ಹಾಗೂ ಯಾರೆಲ್ಲ ಇಲ್ಲಿ ತೊಡಗಿಸಿಕೊಳ್ಳುತ್ತಾರೆಯೋ ಅವರೆಲ್ಲರಿಗೂ ಮುಂದೆ ನಮ್ಮ ಊರಿನ ಯಾವುದೇ ದೈವಸ್ಥಾನ, ಮನೆಗಳಲ್ಲಿ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ.
ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ ಫೋಟೋ ಒಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ದೊರೆತಿಲ್ಲ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…