ಕಾಂತಾರ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದೆ. ದೈವಾರಾಧನೆ ಕುರಿತು ಚಿತ್ರದಲ್ಲಿ ಅದ್ಬುತವಾಗಿ ತೋರಿಸಲಾಗಿದೆ. ಈ ಸಿನಿಮಾ ಸಕ್ಸಸ್ ಆದ ಬಳಿಕ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ.
ಇದೀಗ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದೈವದ ಹೆಸರಲ್ಲಿ ಅನೇಕರು ಹಣ ಮಾಡಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್ಗಳು ಹರಿದಾಡುತ್ತಿದೆ. ಅಂಥವರಿಗೆ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, ಮೈಸೂರು ಭಾಗದ ಜನರು ದೈವನಂಬಿಕೆಗಳನ್ನು ಮುರಿದು, ಪ್ರಚಾರಕ್ಕಾಗಿ, ದುಡ್ಡು ಮಾಡುವುದಕ್ಕಾಗಿ ಅಲ್ಲಲ್ಲಿ ದೈವದ ಕಟ್ಟೆಗಳನ್ನು ಸ್ಥಾಪಿಸಿ ಗೂಗಲ್ ಪೇ ಮಾಡಿ, ಫೋನ್ ಪೇ ಮಾಡಿ ಎನ್ನುತ್ತಿದ್ದಾರೆ.
ದುಡ್ಡು ಸಿಗುತ್ತದೆ ಎಂಬ ಕಾರಣಕ್ಕಾಗಿ ಅಲ್ಲಿ ಹೋಗಿ ನೇಮ ಕಟ್ಟುವವರಿಗೆ, ತಾಸೆ ಬ್ಯಾಂಡ್ ಸೆಟ್ನವರಿಗೆ, ಮಧ್ಯಸ್ಥ, ಮುಕ್ಕಾಲ್ದಿ ಹಾಗೂ ಯಾರೆಲ್ಲ ಇಲ್ಲಿ ತೊಡಗಿಸಿಕೊಳ್ಳುತ್ತಾರೆಯೋ ಅವರೆಲ್ಲರಿಗೂ ಮುಂದೆ ನಮ್ಮ ಊರಿನ ಯಾವುದೇ ದೈವಸ್ಥಾನ, ಮನೆಗಳಲ್ಲಿ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ.
ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ ಫೋಟೋ ಒಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ದೊರೆತಿಲ್ಲ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…