ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್ – Vishwanews24

Featured, ರಾಜ್ಯ ನ್ಯೂಸ್

ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್

ತುಮಕೂರು: ಕೊರಟಗೆರೆಯ ಈದ್ಗಾ ಮೈದಾನದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಪ್ರಥಮವಾಗಿ ಅಲ್ಲಾಗೆ ನಾನು ನಮನ ಸಲ್ಲಿಸುತ್ತೇನೆ. ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರಿದ್ ಹಬ್ಬ ಇದು‌. ನಾನು ಎಲ್ಲರಿಗೂ ನಮನಗಳನ್ನ ಹೇಳುತ್ತೇನೆ. ಅಲ್ಲಾ ಎಲ್ಲರಿಗೂ ಅನೇಕ ರೀತಿ ಪರೀಕ್ಷೆ ಮಾಡುತ್ತಾನೆ. ಅದರಲ್ಲೂ ಮನುಷ್ಯರಿಗೆ ಹೆಚ್ಚು ಪರೀಕ್ಷೆ ಮಾಡುತ್ತಾನೆ.

ಮಹಮ್ಮದ್ ಇಬ್ರಾಹಿಂ ಇಡೀ ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ. ಇದು ಪವಿತ್ರವಾದ ಹಬ್ಬ. ನಾನು ಬಹಳ ಸಂತೋಷವಾಗಿ ನಿಮ್ಮೊಟ್ಟಿಗೆ ಭಾಗಿಯಾಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಅಶಿರ್ವಾದ ಕೇಳಿದ್ದೆ.

ನಿವೆಲ್ಲಾ ಕೊಟ್ಟಿದ್ದೀರಾ, ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಅಶಿರ್ವಾದದಿಂದ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾದ ಕೆಲಸ ನನ್ನದು. ಇದರಲ್ಲಿ ಯಾವುದೇ ಮುಲಾಜಿಲ್ಲದೇ ಕೆಲಸ ನಿಬಾಯಿಸುತ್ತೇನೆ ಎಂದರು.

ನಾಳೆಯೊಳಗೆ ಆಧಾರ್ ಜೋಡಣೆ ಮಾಡದಿದ್ರೆ ಪಾನ್ ಕಾರ್ಡ್ ನಿಷ್ಕ್ರಿಯ – Vishwanews24

Leave a Reply