ಬಾಗಲಕೋಟೆ : ನಾನು ಮತ್ತೆ ಸಿಎಂ ಆಗುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪರ ವಿರೋಧ ವ್ಯಕ್ತಪಡಿಸುವವರ ಸಂಖ್ಯೆ ಏರುತ್ತಿದ್ದು ಈಗ ಎಂಐಎಂ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಈ ಹೇಳಿಕೆ ವಿರೋಧಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ಪರ ನಿಂತಿದ್ದಾರೆ.
ಗೌರವ, ಅಧಿಕಾರ ಕೊಡುವುದು ಭಗವಂತ ಕೈಯಲ್ಲಿದೆ. ಈ ಹಿಂದೆ ಕುಮಾರಸ್ವಾಮಿ ಕಿಂಗ್ ಆಗುತ್ತಾರೆ ಎಂದು ಹೇಳಿದ್ದೆ. ಆಗ ಅಧಿಕಾರದಲ್ಲಿದ್ದವರು ಬೀದಿಗೆ ಬಂದಿದ್ದಾರೆ ಎಂದು ಇಳಕಲ್ ನಗರದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಕುಮಾರಸ್ವಾಮಿ ಅಲ್ಲಾನ ಕೃಪೆಯಿಂದ ಕಿಂಗ್ ಆಗಿದ್ದಾರೆ. ಕುಮಾರಸ್ವಾಮಿಯವರ ಮೇಲೆ ನನಗೆ ಭರವಸೆ ಇದೆ. ನಾವು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಂಡಿದ್ದೇ ತಪ್ಪು ಎಂದು ಕೆಲವರು ಹೇಳಿದರು. ತಪ್ಪೇನು? ಅದೇನು ಇವರಪ್ಪನ ಆಸ್ತಿನಾ? ನಮಗೆ ಬಿಜೆಪಿ ತಡೆಯುವುದೇ ಉದ್ದೇಶ ಎಂದು ಹೇಳಿದರು.
ನಾವೇನೂ ಗುಲಾಮರಲ್ಲ :
ಜಾತ್ಯತೀತ ಸರ್ಟಿಫಿಕೇಟ್ ಬೇಕೆಂದರೆ ನಮ್ಮ ಕಡೆ ಬನ್ನಿ ಎಂದು ಕಾಂಗ್ರೆಸ್ ಹೇಳುತ್ತದೆ. ರಾಷ್ಟ್ರೀಯತೆ ಸರ್ಟಿಫಿಕೇಟ್ ಬೇಕು ಎಂದರೆ ನಮ್ಮೊಂದಿಗೆ ಬನ್ನಿ ಎಂದು ಬಿಜೆಪಿ ಕರೆಯುತ್ತದೆ. ನಾವೇನು ನಿಮ್ಮ ಗುಲಾಮರಲ್ಲ. ಇವೆರಡೂ ಪಕ್ಷಗಳು ಲಾಲಾಗಳು ಇದ್ದ ಹಾಗೆ. ಅವರ ಅಂಗಡಿ ಬಂದ್ ಮಾಡುವ ಸಮಯ ಬಂದಿದೆ ಎಂದು ವ್ಯಂಗ್ಯವಾಡಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…