Featured

ಅಲ್ಲಾಹು, ಭಗವಂತನ ಹೆಸರಲ್ಲಿ ಮಕ್ಕಳನ್ನು ಮಾಡುತ್ತಲೇ ಇದ್ದರೆ ಉಳಿಗಾಲವಿಲ್ಲ: ಬಿಜೆಪಿ ಸಂಸದ

ದೆಹಲಿ: ಅದಾಗಲೇ ಶತಕೋಟಿ ಮೀರಿ ನಿಯಂತ್ರಣ ತಪ್ಪಿ ಬೆಳೆಯುತ್ತಲೇ ಇರುವ ದೇಶದ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣಕ್ಕೆ ತರಲು ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯಸಭೆಯಲ್ಲಿ ಬಿಜೆಪಿ ಸಂಸರು ಬಲವಾಗಿ ಆಗ್ರಹಿಸಿದ್ದಾರೆ.

ಈ ಮಟ್ಟದಲ್ಲಿ ಜನಸಂಖ್ಯೆ ವೃದ್ಧಿಯಾಗುತ್ತಲೇ ಹೋದಲ್ಲಿ ದೇಶದ ಅಭಿವೃದ್ಧಿ ಬಹಳ ಕಷ್ಟ ಎಂದು ಬಿಜೆಪಿ ಸಂಸದ ಅಶೋಕ್‌ ಬಜ್ಪಯಿ ಹೇಳಿದ್ದು, 2022ರ ವೇಳೆಗೆ ಚೀನಾವನ್ನು ಹಿಂದಿಕ್ಕಲಿರುವ ಭಾರತ, ಜಗತ್ತಿನ ಅತಿ ದೊಡ್ಡ ಜನಸಂಖ್ಯೆ ಇರುವ ದೇಶವಾಗಲಿದೆ ಎಂದಿದ್ದಾರೆ.

ಇಷ್ಟೇ ಅಲ್ಲದೇ 2050ರ ವೇಳೆಗೆ ದೇಶದ ಜನಸಂಖ್ಯೆ 166 ಕೋಟಿ ತಲುಪಲಿದೆ ಎಂದ ಬಜ್ಪೆಯಿ, “ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಇಲ್ಲವಾದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯು ಅಭಿವೃದ್ಧಿಯನ್ನು ಮರೆಮಾಚಲಿದೆ” ಎಂದಿದ್ದಾರೆ.

ಇದಕ್ಕೆ ಬೆಂಬಲ ನೀಡಿದ ಮತ್ತೊಬ್ಬ ಬಿಜೆಪಿ ಸಂಸದ ವಿಜಯ್‌ ಪಾಲ್‌ ಸಿಂಗ್‌ ತೋಮರ್‌, “ಸ್ವತಂತ್ರ ಬಂದಾಗ 36 ಕೋಟಿಯಷ್ಟಿದ್ದ ಜನಸಂಖ್ಯೆ ಈಗ 135 ಕೋಟಿಗೆ ಏರಿಕೆ ಕಂಡಿದೆ. ವರ್ಷಕ್ಕೆ ಎರಡು ಕೋಟಿಯಷ್ಟು ವೇಗದಲ್ಲಿ ಜನಸಂಖ್ಯೆ ವೃದ್ಧಿಸುತ್ತಲೇ ಇದೆ” ಎಂದು ಹೇಳಿದ್ದಾರೆ.

“ಭಗವಂತ ಹಾಗು ಅಲ್ಲಾಹುವಿನ ಹೆಸರಲ್ಲಿ ಮಕ್ಕಳನ್ನು ಹುಟ್ಟಿಸಲಾಗುತ್ತಿರುವ ಕಾರಣ, ಭೂಮಿಯ ಮೇಲಿರುವ ಶೇ 2.4ರಷ್ಟು ಪ್ರದೇಶದಲ್ಲಿ ವ್ಯಾಪಿಸಿರುವ ಭಾರತದಲ್ಲಿ ಅದಾಗಲೇ ಜಗತ್ತಿನ ಜನಸಂಖ್ಯೆಯ ಶೇ 17.4 ರಷ್ಟು ಜನರಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

18 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago