Featured

ಅಲ್ಲಾಹು, ಭಗವಂತನ ಹೆಸರಲ್ಲಿ ಮಕ್ಕಳನ್ನು ಮಾಡುತ್ತಲೇ ಇದ್ದರೆ ಉಳಿಗಾಲವಿಲ್ಲ: ಬಿಜೆಪಿ ಸಂಸದ

ದೆಹಲಿ: ಅದಾಗಲೇ ಶತಕೋಟಿ ಮೀರಿ ನಿಯಂತ್ರಣ ತಪ್ಪಿ ಬೆಳೆಯುತ್ತಲೇ ಇರುವ ದೇಶದ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಣಕ್ಕೆ ತರಲು ಕ್ರಮ ತೆಗೆದುಕೊಳ್ಳಬೇಕೆಂದು ರಾಜ್ಯಸಭೆಯಲ್ಲಿ ಬಿಜೆಪಿ ಸಂಸರು ಬಲವಾಗಿ ಆಗ್ರಹಿಸಿದ್ದಾರೆ.

ಈ ಮಟ್ಟದಲ್ಲಿ ಜನಸಂಖ್ಯೆ ವೃದ್ಧಿಯಾಗುತ್ತಲೇ ಹೋದಲ್ಲಿ ದೇಶದ ಅಭಿವೃದ್ಧಿ ಬಹಳ ಕಷ್ಟ ಎಂದು ಬಿಜೆಪಿ ಸಂಸದ ಅಶೋಕ್‌ ಬಜ್ಪಯಿ ಹೇಳಿದ್ದು, 2022ರ ವೇಳೆಗೆ ಚೀನಾವನ್ನು ಹಿಂದಿಕ್ಕಲಿರುವ ಭಾರತ, ಜಗತ್ತಿನ ಅತಿ ದೊಡ್ಡ ಜನಸಂಖ್ಯೆ ಇರುವ ದೇಶವಾಗಲಿದೆ ಎಂದಿದ್ದಾರೆ.

ಇಷ್ಟೇ ಅಲ್ಲದೇ 2050ರ ವೇಳೆಗೆ ದೇಶದ ಜನಸಂಖ್ಯೆ 166 ಕೋಟಿ ತಲುಪಲಿದೆ ಎಂದ ಬಜ್ಪೆಯಿ, “ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಇಲ್ಲವಾದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯು ಅಭಿವೃದ್ಧಿಯನ್ನು ಮರೆಮಾಚಲಿದೆ” ಎಂದಿದ್ದಾರೆ.

ಇದಕ್ಕೆ ಬೆಂಬಲ ನೀಡಿದ ಮತ್ತೊಬ್ಬ ಬಿಜೆಪಿ ಸಂಸದ ವಿಜಯ್‌ ಪಾಲ್‌ ಸಿಂಗ್‌ ತೋಮರ್‌, “ಸ್ವತಂತ್ರ ಬಂದಾಗ 36 ಕೋಟಿಯಷ್ಟಿದ್ದ ಜನಸಂಖ್ಯೆ ಈಗ 135 ಕೋಟಿಗೆ ಏರಿಕೆ ಕಂಡಿದೆ. ವರ್ಷಕ್ಕೆ ಎರಡು ಕೋಟಿಯಷ್ಟು ವೇಗದಲ್ಲಿ ಜನಸಂಖ್ಯೆ ವೃದ್ಧಿಸುತ್ತಲೇ ಇದೆ” ಎಂದು ಹೇಳಿದ್ದಾರೆ.

“ಭಗವಂತ ಹಾಗು ಅಲ್ಲಾಹುವಿನ ಹೆಸರಲ್ಲಿ ಮಕ್ಕಳನ್ನು ಹುಟ್ಟಿಸಲಾಗುತ್ತಿರುವ ಕಾರಣ, ಭೂಮಿಯ ಮೇಲಿರುವ ಶೇ 2.4ರಷ್ಟು ಪ್ರದೇಶದಲ್ಲಿ ವ್ಯಾಪಿಸಿರುವ ಭಾರತದಲ್ಲಿ ಅದಾಗಲೇ ಜಗತ್ತಿನ ಜನಸಂಖ್ಯೆಯ ಶೇ 17.4 ರಷ್ಟು ಜನರಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

5 hours ago