Featured

ಅವಕಾಶ ಸಿಕ್ಕರೆ ಸರ್ಕಾರ ರಚಿಸಿ : ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅವಕಾಶ ಸಿಕ್ಕರೆ ಸರ್ಕಾರ ರಚನೆಗೆ ಬಿಜೆಪಿ ಹೈಕಮಾಂಡ್‌ನಿಂದ ಹಸಿರು ನಿಶಾನೆ ಸಿಕ್ಕಿದ್ದು, ಮಕರ ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಕ್ರಮಣ ಸಂಭವಿಸುವ ಲಕ್ಷಣಗಳು ಗೋಚರಿಸುತ್ತಿವೆ.

ಈ ಹಿಂದೆ ಆಪರೇಷನ್ ಕಮಲ ಮಾಡದಂತೆ ಸೂಚನೆ ನೀಡಿದ್ದ ಹೈಕಮಾಂಡ್ ಇದೀಗ ಗ್ರೀನ್ ಸಿಗ್ನಲ್ ನೀಡಿದೆ. ಸರಕಾರ ರಚನೆ ಮಾಡಲು ಅವಕಾಶಗಳಿದ್ದರೆ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಹೈಕಮಾಂಡ್ ರಾಜ್ಯ ಬಿಜೆಪಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ವರಿಷ್ಠರ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದೆ. ಹಾಗಾಗಿ ಜ.15ರ ನಂತರ ಬದಲಾದ ಸನ್ನಿವೇಶದಲ್ಲಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ಸರ್ಕಾರ ರಚನೆ ಮಾಡುವ ಗಂಭೀರ ಪ್ರಯತ್ನ ನಡೆದಿದೆ. ಇದಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ನಾಯಕರ ಮಟ್ಟದಲ್ಲೇ ಕಾರ್ಯತಂತ್ರ ಹೆಣೆಯಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಹಿಂದೆ ಸರ್ಕಾರ ರಚನೆಗೆ ನಡೆಸಿದ ಪ್ರಯತ್ನ ವಿಫ‌ಲವಾಗಿ ಹಿನ್ನಡೆ ಅನುಭವಿಸುವ ಜತೆಗೆ ಪಕ್ಷದ ವರ್ಚಸ್ಸಿಗೂ ಧಕ್ಕೆ ಉಂಟಾಗಿದ್ದು, ಪಕ್ಷದ ವರಿಷ್ಠರ ಅಸಮಾಧಾನಕ್ಕೆ ಕಾರಣವಾಗಿತ್ತು. ಹಾಗಾಗಿ ವರಿಷ್ಠರ ಸಹಮತವಿಲ್ಲದೇ ಮತ್ತೆ ಸರ್ಕಾರ ರಚನೆಗೆ ಪ್ರಯತ್ನ ನಡೆಸುವ ಬಗ್ಗೆ ರಾಜ್ಯ ಬಿಜೆಪಿ ನಾಯಕರಲ್ಲೂ ಗೊಂದಲವಿತ್ತು. ಅಂತಿಮವಾಗಿ ಅವಕಾಶ ಸಿಕ್ಕರೆ ಸರ್ಕಾರ ರಚನೆಗೆ ವರಿಷ್ಠರಿಂದ ಹಸಿರು ನಿಶಾನೆ ಸಿಕ್ಕಿದ್ದು, ಸರ್ಕಾರ ರಚಿಸುವ ಹುಮ್ಮಸ್ಸಿಗೆ ಹೆಚ್ಚು ಬಲ ಬಂದಂತಾಗಿದೆ ಎಂದು ಉನ್ನತ  ಮೂಲಗಳು ತಿಳಿಸಿವೆ.

ಪೂರಕ ಸನ್ನಿವೇಶ ನಿರ್ಮಾಣವಾದರೆ ಸರ್ಕಾರ ರಚನೆಗೆ ಗ್ರೀನ್‌ ಸಿಗ್ನಲ್‌ ತೋರಿರುವ ವರಿಷ್ಠರು, ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಪ್ರಯತ್ನ ನಡೆಸಿದರೆ ವಿಫ‌ಲವಾಗಬಾರದು. ಸುಸ್ಥಿರ ಸರ್ಕಾರ ರಚನೆಗೆ ಪೂರಕ ವ್ಯವಸ್ಥೆ ಮಾಡಿಕೊಂಡು ಖಾತರಿಯಾದ ಬಳಿಕವಷ್ಟೇ ಕಾರ್ಯಪ್ರವೃತ್ತವಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ವರಿಷ್ಠರು ರವಾನಿಸಿದ್ದಾರೆ ಎನ್ನಲಾಗಿದೆ.

 

Vishwa News 24

Recent Posts

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

6 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

2 hours ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

2 hours ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

2 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

3 hours ago