Featured

ಅವಕಾಶ ಸಿಕ್ಕರೆ ಸರ್ಕಾರ ರಚಿಸಿ : ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅವಕಾಶ ಸಿಕ್ಕರೆ ಸರ್ಕಾರ ರಚನೆಗೆ ಬಿಜೆಪಿ ಹೈಕಮಾಂಡ್‌ನಿಂದ ಹಸಿರು ನಿಶಾನೆ ಸಿಕ್ಕಿದ್ದು, ಮಕರ ಸಂಕ್ರಾಂತಿ ಬಳಿಕ ರಾಜ್ಯ ರಾಜಕಾರಣದಲ್ಲಿ ಸಂಕ್ರಮಣ ಸಂಭವಿಸುವ ಲಕ್ಷಣಗಳು ಗೋಚರಿಸುತ್ತಿವೆ.

ಈ ಹಿಂದೆ ಆಪರೇಷನ್ ಕಮಲ ಮಾಡದಂತೆ ಸೂಚನೆ ನೀಡಿದ್ದ ಹೈಕಮಾಂಡ್ ಇದೀಗ ಗ್ರೀನ್ ಸಿಗ್ನಲ್ ನೀಡಿದೆ. ಸರಕಾರ ರಚನೆ ಮಾಡಲು ಅವಕಾಶಗಳಿದ್ದರೆ ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಹೈಕಮಾಂಡ್ ರಾಜ್ಯ ಬಿಜೆಪಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ದೆಹಲಿಯಲ್ಲಿ ವರಿಷ್ಠರ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿ ಆತ್ಮವಿಶ್ವಾಸ ಹೆಚ್ಚಾಗಿದೆ. ಹಾಗಾಗಿ ಜ.15ರ ನಂತರ ಬದಲಾದ ಸನ್ನಿವೇಶದಲ್ಲಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ, ಸರ್ಕಾರ ರಚನೆ ಮಾಡುವ ಗಂಭೀರ ಪ್ರಯತ್ನ ನಡೆದಿದೆ. ಇದಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ನಾಯಕರ ಮಟ್ಟದಲ್ಲೇ ಕಾರ್ಯತಂತ್ರ ಹೆಣೆಯಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಹಿಂದೆ ಸರ್ಕಾರ ರಚನೆಗೆ ನಡೆಸಿದ ಪ್ರಯತ್ನ ವಿಫ‌ಲವಾಗಿ ಹಿನ್ನಡೆ ಅನುಭವಿಸುವ ಜತೆಗೆ ಪಕ್ಷದ ವರ್ಚಸ್ಸಿಗೂ ಧಕ್ಕೆ ಉಂಟಾಗಿದ್ದು, ಪಕ್ಷದ ವರಿಷ್ಠರ ಅಸಮಾಧಾನಕ್ಕೆ ಕಾರಣವಾಗಿತ್ತು. ಹಾಗಾಗಿ ವರಿಷ್ಠರ ಸಹಮತವಿಲ್ಲದೇ ಮತ್ತೆ ಸರ್ಕಾರ ರಚನೆಗೆ ಪ್ರಯತ್ನ ನಡೆಸುವ ಬಗ್ಗೆ ರಾಜ್ಯ ಬಿಜೆಪಿ ನಾಯಕರಲ್ಲೂ ಗೊಂದಲವಿತ್ತು. ಅಂತಿಮವಾಗಿ ಅವಕಾಶ ಸಿಕ್ಕರೆ ಸರ್ಕಾರ ರಚನೆಗೆ ವರಿಷ್ಠರಿಂದ ಹಸಿರು ನಿಶಾನೆ ಸಿಕ್ಕಿದ್ದು, ಸರ್ಕಾರ ರಚಿಸುವ ಹುಮ್ಮಸ್ಸಿಗೆ ಹೆಚ್ಚು ಬಲ ಬಂದಂತಾಗಿದೆ ಎಂದು ಉನ್ನತ  ಮೂಲಗಳು ತಿಳಿಸಿವೆ.

ಪೂರಕ ಸನ್ನಿವೇಶ ನಿರ್ಮಾಣವಾದರೆ ಸರ್ಕಾರ ರಚನೆಗೆ ಗ್ರೀನ್‌ ಸಿಗ್ನಲ್‌ ತೋರಿರುವ ವರಿಷ್ಠರು, ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಪ್ರಯತ್ನ ನಡೆಸಿದರೆ ವಿಫ‌ಲವಾಗಬಾರದು. ಸುಸ್ಥಿರ ಸರ್ಕಾರ ರಚನೆಗೆ ಪೂರಕ ವ್ಯವಸ್ಥೆ ಮಾಡಿಕೊಂಡು ಖಾತರಿಯಾದ ಬಳಿಕವಷ್ಟೇ ಕಾರ್ಯಪ್ರವೃತ್ತವಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ವರಿಷ್ಠರು ರವಾನಿಸಿದ್ದಾರೆ ಎನ್ನಲಾಗಿದೆ.

 

Vishwa News 24

Recent Posts

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ- vishwanews24

ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…

1 hour ago

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ – vishwanews24

ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…

2 hours ago

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  – vishwanews24

ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ  ಉಡುಪಿ: ಮಂಗಳೂರಿನಿಂದ…

2 hours ago

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

3 hours ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

3 hours ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

3 hours ago