ಶಿವಮೊಗ್ಗ: ಕನ್ನಡದ ನಡ (ಸೊಂಟ) ಮುರಿಯುವ ನಡೆ ಕನ್ನಡ ನಾಡಿನಲ್ಲಿ ಶುರುವಾಗಿದೆ. ನಾವು ಭಾಷಾಂಧರೂ ಅಂದರೂ ಸರಿ ಈ ನಡೆಯ ವಿರುದ್ಧ ತಮಿಳರನ್ನು ಅನುಸರಿಸಿ ಹೋರಾಟ ಸಂಘಟಿಸಬೇಕಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.
ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಠ್ಯಕ್ರಮ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಖಂಡಿಸಿ ಬುಧವಾರ ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿಗೆ ಆರಂಭವಾದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಅವರ ಭಾಷೆಗೆ ಕೊಂಚ ಯಡವಟ್ಟಾದರೂ ಸರಿ ಆಳುವವರು, ವಿರೋಧದವರು ಎಲ್ಲ ಒಟ್ಟಾಗಿ ಸೇರಿಬಿಡುತ್ತಾರೆ. ಇಲ್ಲಿಯೂ ನಮಗೆ ಈಗ ಪಕ್ಷ ಇಲ್ಲ. ಕವಿ ಪಕ್ಷ, ಕನ್ನಡ ಪಕ್ಷದ ಹೋರಾಟದ ಹಾದಿ ಇಲ್ಲಿಂದಲೇ ಶುರುವಾಗಿದೆ ಎಂದರು.
ಬಸವ ಅಂದರೆ ಕನ್ನಡ. ಕುವೆಂಪು ಅಂದರೆ ಕನ್ನಡ. ಬಸವ ಅಂದರೆ ಕರುನಾಡು. ಕುವೆಂಪು ಅಂದರೆ ಕರ್ನಾಟಕ. ಈ ಎರಡಕ್ಕೂ ಅಪಮಾನ ಆದ ಮೇಲೆ ನಾವು ಇಲ್ಲಿದ್ದು ಏನು ಮಾಡುವುದು ಎಂದು ಪ್ರಶ್ನಿಸಿದ ಹಂಸಲೇಖ, ಅವತ್ತು ಗೋಕಾಕ್ ಚಳವಳಿ. ಇವತ್ತು ಕುಪ್ಪಳ್ಳಿ ಕಹಳೆ. ಇದು ನಾಡಿನಾದ್ಯಂತ ಮೊಳಗಲಿದೆ ಎಂದರು.
ನಮ್ಮ ನಾಡೇ ಒಂದು ಗೀತೆ. ನಮ್ಮ ನಾಡೆ ಒಂದು ಧ್ವಜ. ಅವೆರಡಕ್ಕೂ ಅಪಮಾನ ಆಗಿ ಕನ್ನಡಕ್ಕೆ ಕುತ್ತು ಬಂದ ಮೇಲೆ ಸುಮ್ಮನಿರುವುದು ಹೇಗೆ. ಕನ್ನಡಕ್ಕೆ ಮಹಾಮನೆ ಕಲ್ಯಾಣ. ಕವಿಶೈಲ ಗುರುಮನೆ. ಹೀಗಾಗಿ ಗುರುಮನೆಯಿಂದಲೇ ಹೋರಾಟದ ಕಹಳೆ ಊದುತ್ತಿದ್ದೇವೆ ಎಂದು ಹೇಳಿದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…