Featured

ಅವತ್ತು ಗೋಕಾಕ್ ಚಳವಳಿ; ಇವತ್ತು ಕುಪ್ಪಳ್ಳಿ ಕಹಳೆ : ಹಂಸಲೇಖ -Vishwanews24

ಪಠ್ಯಕ್ರಮ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಖಂಡಿಸಿ  ಕವಿಶೈಲದಿಂದ ತೀರ್ಥಹಳ್ಳಿಗೆ ಕಾಲ್ನಡಿಗೆ..

ಕನ್ನಡದ ನಡ (ಸೊಂಟ) ಮುರಿಯುವ ನಡೆ ಕನ್ನಡ ನಾಡಿನಲ್ಲಿ ಶುರುವಾಗಿದೆ..

ಕನ್ನಡ ಪಕ್ಷದ ಹೋರಾಟದ ಹಾದಿ ಇಲ್ಲಿಂದಲೇ ಶುರು..

ಬಸವ ಅಂದರೆ ಕರುನಾಡು. ಕುವೆಂಪು ಅಂದರೆ ಕರ್ನಾಟಕ..

ಈ ಎರಡಕ್ಕೂ ಅಪಮಾನ ಆದ ಮೇಲೆ ನಾವು ಇಲ್ಲಿದ್ದು ಏನು ಮಾಡುವುದು..

ಶಿವಮೊಗ್ಗ: ಕನ್ನಡದ ನಡ (ಸೊಂಟ) ಮುರಿಯುವ ನಡೆ ಕನ್ನಡ ನಾಡಿನಲ್ಲಿ ಶುರುವಾಗಿದೆ. ನಾವು ಭಾಷಾಂಧರೂ ಅಂದರೂ ಸರಿ ಈ ನಡೆಯ ವಿರುದ್ಧ ತಮಿಳರನ್ನು ಅನುಸರಿಸಿ ಹೋರಾಟ ಸಂಘಟಿಸಬೇಕಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಠ್ಯಕ್ರಮ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪುಗೆ ಅಪಮಾನ ಖಂಡಿಸಿ ಬುಧವಾರ ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿಗೆ ಆರಂಭವಾದ ಪಾದಯಾತ್ರೆಯಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಅವರ ಭಾಷೆಗೆ ಕೊಂಚ ಯಡವಟ್ಟಾದರೂ ಸರಿ ಆಳುವವರು, ವಿರೋಧದವರು ಎಲ್ಲ ಒಟ್ಟಾಗಿ ಸೇರಿಬಿಡುತ್ತಾರೆ. ಇಲ್ಲಿಯೂ ನಮಗೆ ಈಗ ಪಕ್ಷ ಇಲ್ಲ. ಕವಿ ಪಕ್ಷ, ಕನ್ನಡ ಪಕ್ಷದ ಹೋರಾಟದ ಹಾದಿ ಇಲ್ಲಿಂದಲೇ ಶುರುವಾಗಿದೆ ಎಂದರು.

ಬಸವ ಅಂದರೆ ಕನ್ನಡ. ಕುವೆಂಪು ಅಂದರೆ ಕನ್ನಡ. ಬಸವ ಅಂದರೆ ಕರುನಾಡು. ಕುವೆಂಪು ಅಂದರೆ ಕರ್ನಾಟಕ. ಈ ಎರಡಕ್ಕೂ ಅಪಮಾನ ಆದ ಮೇಲೆ ನಾವು ಇಲ್ಲಿದ್ದು ಏನು ಮಾಡುವುದು ಎಂದು ಪ್ರಶ್ನಿಸಿದ ಹಂಸಲೇಖ, ಅವತ್ತು ಗೋಕಾಕ್ ಚಳವಳಿ. ಇವತ್ತು ಕುಪ್ಪಳ್ಳಿ ಕಹಳೆ. ಇದು ನಾಡಿನಾದ್ಯಂತ ಮೊಳಗಲಿದೆ ಎಂದರು.

ನಮ್ಮ ನಾಡೇ ಒಂದು ಗೀತೆ. ನಮ್ಮ ನಾಡೆ ಒಂದು ಧ್ವಜ. ಅವೆರಡಕ್ಕೂ ಅಪಮಾನ ಆಗಿ ಕನ್ನಡಕ್ಕೆ ಕುತ್ತು ಬಂದ ಮೇಲೆ ಸುಮ್ಮನಿರುವುದು ಹೇಗೆ. ಕನ್ನಡಕ್ಕೆ ಮಹಾಮನೆ ಕಲ್ಯಾಣ. ಕವಿಶೈಲ ಗುರುಮನೆ. ಹೀಗಾಗಿ ಗುರುಮನೆಯಿಂದಲೇ ಹೋರಾಟದ ಕಹಳೆ ಊದುತ್ತಿದ್ದೇವೆ ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago