ಬೀದರ್: ನಮೋ ಭಾರತ್ ಕಾರ್ಯಕ್ರಮವನ್ನು ಅನೇಕ ಕಡೆ ತಡೆಯುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಕೆಲಸ ಆಗಿದ್ದು, ಅವರ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ.
ಬೀದರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರದ ಮದ, ಆತಂಕದಿಂದ ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಯದಂತೆ ಪ್ಲ್ಯಾನ್ ಮಾಡಿದ್ದಾರೆ. ಬುಧವಾರ ತಡರಾತ್ರಿ ತಹಶೀಲ್ದಾರ್ ಕಡೆಯಿಂದ ಪತ್ರಕೊಟ್ಟು, ನಿಮ್ಮ ಕಾರ್ಯಕ್ರಮ ಕ್ಯಾನ್ಸಲ್ ಮಾಡಲಾಗಿದೆ ಎಂದು ಮಾಹಿತಿ ಕೊಟ್ಟಿದ್ದಾರೆ. ಬಳಿಕ ಜಿಲ್ಲೆಯ ಗಡಿಯಲ್ಲಿ ಯಾವ ಆದೇಶ ಇಲ್ಲದೇ ತಡೆಯುವ ಕೆಲಸ ಮಾಡಿದ್ದಾರೆ. ಮಧ್ಯರಾತ್ರಿವರೆಗೂ ಅಲ್ಲೇ ಇದ್ದು, ಆದೇಶ ಪ್ರತಿ ಕೊಡುವ ತನಕ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದೆ. ರಾತ್ರಿ 1 ಗಂಟೆಗೆ ಆದೇಶ ಪ್ರತಿ ಕೊಟ್ಟರು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.
ಕಾರ್ಯಕ್ರಮದ ಪರವಾನಿಗೆ, ಮೈಕ್ ಪರವಾನಗಿ ಕ್ಯಾನ್ಸಲ್ ಮಾಡಿ ಕಾಂಗ್ರೆಸ್ ನನಗೆ ವಿನಾಕಾರಣ ಕಿರುಕುಳ ನೀಡಿದೆ. ತುರ್ತಾಗಿ ಕಮಿಷನರ್ ಬಳಿ ಆದೇಶ ಪ್ರತಿ ತಂದು ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದಾರೆ. ಸರ್ಕಾರದ ಸೂತ್ರ ಹಿಡಿದ ಈ ಜನ ಪ್ರಜಾಪ್ರಭುತ್ವದ ಬಗ್ಗೆ ಮಾತಾಡಿ, ಸಂವಿಧಾನ ಉಳಿಸಿ ಎಂದು ಹೇಳುತ್ತಾರೆ. ಮತ್ತೊಂದೆಡೆ ವ್ಯಕ್ತಿಯೊಬ್ಬನ ಹಕ್ಕು ತಡೆಯುವ ಈ ಪ್ರಯತ್ನ ಮಾಡುತ್ತಾರೆ. ಈ ನಡೆ ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ನಾವು ಹಾಕಿದ ಒಂದು ಮತ ರಾಜ್ಯದಲ್ಲಿ ಇಂತಹ ಸರ್ಕಾರವನ್ನು ತಂದಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…