Featured

ಅವರ ಕ್ಷೇತ್ರದಲ್ಲಿ ಪ್ರಧಾನಿ  ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ : ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ – Vishwanews24

ಅವರ ಕ್ಷೇತ್ರದಲ್ಲಿ ಪ್ರಧಾನಿ  ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ : ಪ್ರಿಯಾಂಕ್ ಖರ್ಗೆ ವಿರುದ್ಧ ಸೂಲಿಬೆಲೆ ಆಕ್ರೋಶ

ಬೀದರ್: ನಮೋ ಭಾರತ್ ಕಾರ್ಯಕ್ರಮವನ್ನು ಅನೇಕ ಕಡೆ ತಡೆಯುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ  ಕ್ಷೇತ್ರ ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಕೆಲಸ ಆಗಿದ್ದು, ಅವರ ಕ್ಷೇತ್ರದಲ್ಲಿ ಪ್ರಧಾನಿ ಮೋದಿ  ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ  ಕಿಡಿಕಾರಿದ್ದಾರೆ.

ಬೀದರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರದ ಮದ, ಆತಂಕದಿಂದ ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಯದಂತೆ ಪ್ಲ್ಯಾನ್ ಮಾಡಿದ್ದಾರೆ. ಬುಧವಾರ ತಡರಾತ್ರಿ ತಹಶೀಲ್ದಾರ್ ಕಡೆಯಿಂದ ಪತ್ರಕೊಟ್ಟು, ನಿಮ್ಮ ಕಾರ್ಯಕ್ರಮ ಕ್ಯಾನ್ಸಲ್ ಮಾಡಲಾಗಿದೆ ಎಂದು ಮಾಹಿತಿ ಕೊಟ್ಟಿದ್ದಾರೆ. ಬಳಿಕ ಜಿಲ್ಲೆಯ ಗಡಿಯಲ್ಲಿ ಯಾವ ಆದೇಶ ಇಲ್ಲದೇ ತಡೆಯುವ ಕೆಲಸ ಮಾಡಿದ್ದಾರೆ. ಮಧ್ಯರಾತ್ರಿವರೆಗೂ ಅಲ್ಲೇ ಇದ್ದು, ಆದೇಶ ಪ್ರತಿ ಕೊಡುವ ತನಕ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದೆ. ರಾತ್ರಿ 1 ಗಂಟೆಗೆ ಆದೇಶ ಪ್ರತಿ ಕೊಟ್ಟರು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಕಾರ್ಯಕ್ರಮದ ಪರವಾನಿಗೆ, ಮೈಕ್ ಪರವಾನಗಿ ಕ್ಯಾನ್ಸಲ್ ಮಾಡಿ ಕಾಂಗ್ರೆಸ್  ನನಗೆ ವಿನಾಕಾರಣ ಕಿರುಕುಳ ನೀಡಿದೆ. ತುರ್ತಾಗಿ ಕಮಿಷನರ್ ಬಳಿ ಆದೇಶ ಪ್ರತಿ ತಂದು ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದಾರೆ. ಸರ್ಕಾರದ ಸೂತ್ರ ಹಿಡಿದ ಈ ಜನ ಪ್ರಜಾಪ್ರಭುತ್ವದ ಬಗ್ಗೆ ಮಾತಾಡಿ, ಸಂವಿಧಾನ ಉಳಿಸಿ ಎಂದು ಹೇಳುತ್ತಾರೆ. ಮತ್ತೊಂದೆಡೆ ವ್ಯಕ್ತಿಯೊಬ್ಬನ ಹಕ್ಕು ತಡೆಯುವ ಈ ಪ್ರಯತ್ನ ಮಾಡುತ್ತಾರೆ. ಈ ನಡೆ ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ನಾವು ಹಾಕಿದ ಒಂದು ಮತ ರಾಜ್ಯದಲ್ಲಿ ಇಂತಹ ಸರ್ಕಾರವನ್ನು ತಂದಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

7 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

7 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago