Featured

ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ : ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಖಡಕ್ ಸೂಚನೆ – vishwanews24

ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ : ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಖಡಕ್ ಸೂಚನೆ

ಬೆಂಗಳೂರು: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಮಂಡ್ಯದಲ್ಲಿ ಮಗು ಮೃತಪಟ್ಟ ಘಟನೆ ಕರ್ನಾಟಕದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಆ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ ಪೊಲೀಸರಿಗೆ ಖಡಕ್ ಸೂಚನೆಯನ್ನೂ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಸಂಭವಿಸಿದ ಘಟನೆ ತಲೆತಗ್ಗಿಸುವಂತಹದ್ದು. ಘಟನೆ ಸಂಬಂಧ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಮತ್ತೆ ಇಂತಹ ಘಟನೆ ಆಗದಂತೆ ಕ್ರಮ ಕೈಗೊಳ್ಳುತ್ತೇವೆ. ಇವತ್ತು ಸಭೆ ಕರೆದಿದ್ದೇನೆ, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಮಂಡ್ಯದ ಘಟನೆಯಲ್ಲಿ ಪೊಲೀಸರು ಮಾನವೀಯತೆ ತೋರಲಿಲ್ಲ, ಸ್ವಂತಿಕೆ ಪ್ರದರ್ಶಿಸಲಿಲ್ಲ. ಸರಿಯಾಗಿ ನಡೆದುಕೊಳ್ಳಲಿಲ್ಲ. ಪೊಲೀಸರು ಅವೈಜ್ಞಾನಿಕವಾಗಿ ಸವಾರರನ್ನು ತಡೆಯುವುದು ಬೇಡ. ಪೊಲೀಸರು ಎಲ್ಲೋ ಮೂಲೆಯಲ್ಲಿ ನಿಂತು ದಿಢೀರ್ ಆಗಿ ಎದುರು ಬಂದು ತಡೆಯುತ್ತಾರೆ. ಪೊಲೀಸರು ಹೀಗೆ ಮಾಡಬಾರದು. ತಪಾಸಣೆ ನಡೆಸಲು ಅದರದ್ದೇ ಆದ ಒಂದು ಪದ್ಧತಿ ಇದೆ. ಅದನ್ನು ಪೊಲೀಸರು ಅನುಸರಿಸಬೇಕು ಎಂದು ಪರಮೇಶ್ವರ್ ಖಡಕ್ ಸೂಚನೆ ನೀಡಿದರು.

ಸ್ಪೀಡಾಗಿ ಬರುವ ಬೈಕ್​ ಸವಾರರನ್ನು ಪೊಲೀಸರು ದಿಢೀರಾಗಿ ಎದುರು ಬಂದು ತಡೆಯುತ್ತಾರೆ. ಇದರಿಂದ ಸವಾರರು ವಿಚಲಿತರಾಗುತ್ತಾರೆ. ಈ ವಿಚಾರವಾಗಿ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ಸರಿಯಾದ ಸೂಚನೆ ಕೊಡುತ್ತೇವೆ ಎಂದು ಅವರು ಹೇಳಿದರು.

ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರೂ ಪೊಲೀಸರು ಬಿಡಲಿಲ್ಲ. ಇಂತಹ ಸಂದರ್ಭಗಳಲ್ಲಿ ಪೊಲೀಸರು ಸ್ವಂತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು.

ಮಂಡ್ಯದಲ್ಲಿ ಸೋಮವಾರ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆ ಮಾಡುವ ವೇಳೆ ಬೈಕ್ ಸವಾರ ಪೊಲೀಸರ ಮುಂದೆ ನಿಲ್ಲಿಸಲು ಹೋಗಿ ಆಯತಪ್ಪಿದ ಕಾರಣ ಮೂರು ವರ್ಷ ಮಗು ಕೆಳಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿತ್ತು.

 

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

16 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago