ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ವಿಧಿಸಿದೆ.
ವೆಬ್ಸೈಟ್ಗಳು, ಡಿಜಿಟಲ್ ಪ್ಲಾಟ್ಫಾರ್ಮ್ಗಳು ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿನ ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದ ಎಲ್ಲ ಮಾನಹಾನಿಕರ ವೀಡಿಯೊಗಳು, ಆಡಿಯೊ ಕ್ಲಿಪ್ಗಳು, ಕರೆ ರೆಕಾರ್ಡಿಂಗ್ಗಳು, ದೃಶ್ಯಗಳು ಮತ್ತು ಪತ್ರಿಕಾ ವರದಿಗಳನ್ನು ತಕ್ಷಣವೇ ತೆಗೆದುಹಾಕಲು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶಿಸಿದೆ. ಜತೆಗೆ, ಪ್ರತಿವಾದಿಗಳಿಗೆ ತುರ್ತು ನೋಟಿಸ್ ಹಾಗೂ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಿದೆ.
ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಆರೋಪದಲ್ಲಿ ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ ನ್ಯಾಯಾಧೀಶ ಗೋಪಾಲ ಕೃಷ್ಣ ರೈ ಅವರು ಈ ಆದೇಶ ಮಾಡಿದ್ದಾರೆ.
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…
ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…