ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ವಿಧಿಸಿದೆ.
ವೆಬ್ಸೈಟ್ಗಳು, ಡಿಜಿಟಲ್ ಪ್ಲಾಟ್ಫಾರ್ಮ್ಗಳು ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿನ ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದ ಎಲ್ಲ ಮಾನಹಾನಿಕರ ವೀಡಿಯೊಗಳು, ಆಡಿಯೊ ಕ್ಲಿಪ್ಗಳು, ಕರೆ ರೆಕಾರ್ಡಿಂಗ್ಗಳು, ದೃಶ್ಯಗಳು ಮತ್ತು ಪತ್ರಿಕಾ ವರದಿಗಳನ್ನು ತಕ್ಷಣವೇ ತೆಗೆದುಹಾಕಲು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶಿಸಿದೆ. ಜತೆಗೆ, ಪ್ರತಿವಾದಿಗಳಿಗೆ ತುರ್ತು ನೋಟಿಸ್ ಹಾಗೂ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಿದೆ.
ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಆರೋಪದಲ್ಲಿ ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ ನ್ಯಾಯಾಧೀಶ ಗೋಪಾಲ ಕೃಷ್ಣ ರೈ ಅವರು ಈ ಆದೇಶ ಮಾಡಿದ್ದಾರೆ.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…