Featured

ಅಶ್ಲೀಲ ವಿಡಿಯೊ ಪ್ರಕರಣ : ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ಪ್ರತಿಬಂಧಕಾದೇಶ – vishwanews24

ಅಶ್ಲೀಲ ವಿಡಿಯೊ ಪ್ರಕರಣ : ರಾಮಚಂದ್ರ ರಾವ್ ವಿರುದ್ಧ ಮಾನಹಾನಿಕರ ಸುದ್ದಿ ಬಿತ್ತರಿಸದಂತೆ ಪ್ರತಿಬಂಧಕಾದೇಶ

ಬೆಂಗಳೂರು: ಅಶ್ಲೀಲ ವಿಡಿಯೊ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಅಥವಾ ಸುದ್ದಿಗಳನ್ನು ಬಿತ್ತರಿಸಂತೆ ಮಾಧ್ಯಮಗಳಿಗೆ ಬೆಂಗಳೂರಿನ 25ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ವಿಧಿಸಿದೆ.

ವೆಬ್‌ಸೈಟ್‌ಗಳು, ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಮತ್ತು ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿನ ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದ ಎಲ್ಲ ಮಾನಹಾನಿಕರ ವೀಡಿಯೊಗಳು, ಆಡಿಯೊ ಕ್ಲಿಪ್‌ಗಳು, ಕರೆ ರೆಕಾರ್ಡಿಂಗ್‌ಗಳು, ದೃಶ್ಯಗಳು ಮತ್ತು ಪತ್ರಿಕಾ ವರದಿಗಳನ್ನು ತಕ್ಷಣವೇ ತೆಗೆದುಹಾಕಲು ಮಾಧ್ಯಮ ಸಂಸ್ಥೆಗಳಿಗೆ ನಿರ್ದೇಶಿಸಿದೆ. ಜತೆಗೆ, ಪ್ರತಿವಾದಿಗಳಿಗೆ ತುರ್ತು ನೋಟಿಸ್ ಹಾಗೂ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಫೆಬ್ರವರಿ 27ಕ್ಕೆ ಮುಂದೂಡಿದೆ.

ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಆರೋಪದಲ್ಲಿ ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಸಲ್ಲಿಸಿದ್ದ ಅಸಲು ದಾವೆಯ ವಿಚಾರಣೆ ನಡೆಸಿದ ನ್ಯಾಯಾಧೀಶ ಗೋಪಾಲ ಕೃಷ್ಣ ರೈ ಅವರು ಈ ಆದೇಶ ಮಾಡಿದ್ದಾರೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

2 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

3 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

3 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

3 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

3 hours ago