ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದೆ. ಕರಾವಳಿ ಜಿಲ್ಲೆ ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಯಲ್ಲಿ ಮಳೆಗಾಲದ ವಾತಾವರಣ ಸೃಷ್ಟಿಯಾಗಿದೆ. ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ ಕಿರಿಕ್ ಕೊಟ್ಟಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗ್ತಿದೆ. ಗಾಳಿಯೂ ವೇಗವಾಗಿ ಬೀಸುತ್ತಿದೆ. ಸಾಲು ಸಾಲು ರಜೆಗಳ ನಡುವೆ ಮಂಗಳೂರಿಗೆ ಹೊರಟಿದ್ದ ಪ್ರವಾಸಿಗರಿಗೆ ನಿರಾಶೆಯಾಗಿದೆ. ಬೀಚ್ ಮತ್ತು ದೇವಸ್ಥಾನದ ಟೂರ್ ಪ್ಲಾನ್ ಮಾಡಿ ಬಂದವರು ದೇವರ ದರ್ಶನ ಮಾಡಿ ವಾಪಸ್ಸಾಗುತ್ತಿದ್ದಾರೆ.
ಜೋರು ಅಲೆಗಳಿರುವ ಕಾರಣ ವಾಟರ್ ಸ್ಟೋರ್ಸ್, ಸೈಂಟ್ ಮೇರಿಸ್ ಐಲ್ಯಾಂಡ್ ಹೋಗುವುದು ನಿಷೇಧ ಮಾಡಲಾಗಿದೆ. ಸಮುದ್ರದ ದೂರಕ್ಕೆ ಹೋಗಿ ಸ್ನಾನ ಮಾಡುವುದಕ್ಕೂ ನಿಷೇಧ ಮಾಡಲಾಗಿದೆ. ನಿಷೇಧ ಮಾಹಿತಿ ಇಲ್ಲದೇ ದೂರದ ಊರುಗಳಿಂದ ಪ್ರವಾಸಕ್ಕೆ ಅಂತ ರಜೆ ಹಾಕಿ ಮಲ್ಪೆ ಸಮುದ್ರ ತೀರಕ್ಕೆ ಬಂದವರು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ. ಹೋಟೆಲ್ ಬುಕ್ಕಿಂಗ್ ಕೂಡ ಕ್ಯಾನ್ಸಲ್ ಮಾಡುತ್ತಿದ್ದಾರೆ. ಹೆಚ್ಚು ದಿನ ಇದ್ದು ಎಂಜಾಯ್ ಮಾಡಬೇಕು ಅಂದುಕೊಂಡ ಪ್ರವಾಸಿಗರು, ತಮ್ಮ ಪ್ಲಾನ್ ಡ್ರಾಪ್ ಮಾಡಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…