ದೆಹಲಿ: ಅಸ್ಸಾಂನಲ್ಲಿ ಪ್ರವಾಹದಿಂದ ಲಕ್ಷಾಂತರ ಜನರು ಸಂಕಷ್ಟದಲ್ಲಿದ್ದು, ಭಾರತದ ಓಟಗಾರ್ತಿ ಹಿಮಾದಾಸ್ ಅವರು ತಮ್ಮ ವೇತನದ ಅರ್ಧದಷ್ಟು ಭಾಗವನ್ನು ಪ್ರವಾಹಪೀಡಿತರಿಗೆ ನೆರವಿಗೆ ನೀಡಿದ್ದಾರೆ.
ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳ ಪ್ರವಾಹದಿಂದ ಮನೆಗಳು, ದೇವಾಲಗಳು ಹಾಗೂ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ.
ನನ್ನ ರಾಜ್ಯದ 33 ಜಿಲ್ಲೆಗಳಲ್ಲಿ 30 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಜನರ ಪರಿಸ್ಥಿತಿ ಹೇಳಲಾರದ ಸ್ಥಿತಿ ತಲುಪಿದೆ. ನಾನು ಕೈಲಾದಷ್ಟು ಸಹಾಯ ಮಾಡಿದ್ದೇನೆ. ದಯವಿಟ್ಟು ನೀವು ಸಹಾಯ ಮಾಡಿ ಸಂತ್ರಸ್ತರಿಗೆ ನೆರವಾಗಿ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸದ್ಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ನಲ್ಲಿ ಕೆಲಸ ನಿರ್ವಹಿಸುತ್ತಿರುವ ಹಿಮಾ ದಾಸ್ ತಮ್ಮ ವೇತನದ ಅರ್ಧ ಭಾಗವನ್ನು ನೀಡುವ ಮೂಲಕ ದೇಶದ ನಾಗರೀಕರನ್ನು ನೆರೆ ಸಂತ್ರಸ್ತರಿಗೆ ನೆರವಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಪ್ರವಾಹದಿಂದ ಇಲ್ಲಿಯವರೆಗೂ 17ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 47 ಲಕ್ಕ್ಕೂ ಅಧಿಕ ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಇನ್ನು 4175 ಹಳ್ಳಿಗಳು ಮತ್ತು 90,000 ಕೃಷಿ ಭೂಮಿ ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇಕಡ 90 ರಷ್ಟು ಮುಳುಗಡೆಯಾಗಿದ್ದು, 10 ಲಕ್ಷಕ್ಕೂ ಅಧಿಕ ಪ್ರಾಣಿ ಸಂಕುಲ ನಶಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…