ಗುವಾಹಟಿ: ಅಸ್ಸಾಂ ಮತ್ತೆ ಒಳನುಸುಳುಕೋರರ ಕೇಂದ್ರವಾಗಲು ನಾನು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಭೆಗಳನ್ನು ಕೈಗೊಂಡಿದ್ದಾರೆ. ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದಿನ್ ಅಜ್ಮಲ್ ಅವರಿಗೆ ಸವಾಲು ಹಾಕಿರುವ ಅಮಿತ್ ಶಾ ಯಾವುದೇ ಕಾರಣಕ್ಕೂ ಅಸ್ಸಾಂ ಮತ್ತೆ ಒಳನುಸುಳುಕೋರರ ಕೇಂದ್ರವಾಗಲು ಬಿಡುವುದಿಲ್ಲ, ಕಳೆದ ಐದು ವರ್ಷಗಳಿಂದ ಭೂಭಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ.
ಜನರು ಯಾರು ಇರಬೇಕು ಯಾರು ಇರಬಾರದು ಎಂದು ತೀರ್ಮಾನ ಮಾಡುತ್ತಾರೆ ಎಂದು ಬಿಜ್ನಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಮಯದಲ್ಲಿ ಹೇಳಿದರು. ಬಂಗಾಳದಲ್ಲಿ ಮೊದಲ ಹಂತದ 30 ಕ್ಷೇತ್ರಗಳ ಪೈಕಿ 26 ಮತ್ತು ಅಸ್ಸಾಂನ ಮೊದಲ ಹಂತದ 47 ಕ್ಷೇತ್ರಗಳ ಪೈಕಿ 37 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಅಮಿತ್ ಶಾ ಭವಿಷ್ಯ ನುಡಿದರು.
ಇದನ್ನೂ ಓದಿ : ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24
ಎರಡೂ ರಾಜ್ಯಗಳಲ್ಲಿ ಶೇಕಡಾವಾರು ಮತದಾನ ಪ್ರಮಾಣ ಅಧಿಕವಾಗಿದ್ದು, ಇದು ಬಿಜೆಪಿ ಪರ ಉಭಯ ರಾಜ್ಯಗಳ ಜನರ ಒಲವು ಎತ್ತಿ ತೋರಿಸುತ್ತದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟರು. ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಪರ ಮತದಾರನ ಒಲವು ಕಂಡುಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಲಭಿಸಲಿವೆ ಎಂದು ಭರವಸೆ ವ್ಯಕ್ತಪಡಿಸಿದರು.
ಇದನ್ನೂ ಓದಿ : ವೇಣೂರು ಗ್ರಾ. ಪಂ. ಚುನಾವಣೆ : ಆರು ಸ್ಧಾನಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಗೆಲುವು -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…