Featured

ಅಸ್ಸಾಂ ಮಾತ್ರವಲ್ಲ, ಇಡೀ ದೇಶವನ್ನು ಅಕ್ರಮ ವಲಸಿಗರಿಂದ ಮುಕ್ತಗೊಳಿಸುತ್ತೇವೆ : ಅಮಿತ್‌ ಶಾ -Vishwanews24

ಗುವಾಹಟಿ: ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆ ಕೈಗೊಳ್ಳಲು ಸರ್ಕಾರ ಸಜ್ಜಾಗಿದೆ ಎಂಬ ಸುಳಿವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ್ದಾರೆ. ಅಸ್ಸಾಂನಲ್ಲಿನ ಎನ್‌ಆರ್‌ಸಿ ಅಂತಿಮ ಪಟ್ಟಿ ಈಗಾಗಲೇ ಪ್ರಕಟವಾಗಿದೆ. ಅದರ ಬೆನ್ನಲ್ಲೇ ಶಾ ಅವರು ಈ ಸುಳಿವು ನೀಡಿದ್ದಾರೆ.

ದೇಶದಾದ್ಯಂತ ಇರುವ ಅಕ್ರಮ ವಲಸಿಗರನ್ನು ಗುರುತಿಸಿ ಅವರನ್ನು ಹೊರಗೆ ಅಟ್ಟಲಾಗುವುದು ಎಂದು ಅವರು ಹೇಳಿದ್ದಾರೆ. ಅಸ್ಸಾಂನ ಎನ್ಆರ್‌ಸಿ ಅಂತಿಮಪಟ್ಟಿ ಆ. 31ರಂದು ಪ್ರಕಟವಾಗಿದೆ. ಒಟ್ಟು 19 ಲಕ್ಷ ಮಂದಿಯನ್ನು ಪಟ್ಟಿಯಿಂದ ಹೊರಗೆ ಇರಿಸಲಾಗಿದೆ.

ಅಕ್ರಮ ವಲಸಿಗರು ದೇಶದ ಯಾವುದೇ ಮೂಲೆಯಲ್ಲಿದ್ದರೂ ಗುರುತಿಸಿ ಹೊರದಬ್ಬಲಾಗುವುದು ಎಂದು ಈಶಾನ್ಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದ ಅವರು ಭಾನುವಾರ ಹೇಳಿದ್ದರು. ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್‌ಇಡಿಎ) ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ.

‘ಬಹಳಷ್ಟು ಮಂದಿಯ ಹೆಸರು ಎನ್‌ಆರ್‌ಸಿಯಿಂದ ಬಿಟ್ಟುಹೋಗಿದೆ ಎಂಬ ಭಾವನೆ ಇದೆ. ಅಕ್ರಮ ವಲಸಿಗರು ಅಸ್ಸಾಂನಲ್ಲಿ ನೆಲೆಸಲು ಬಿಡುವುದಿಲ್ಲ, ಅವರು ಬೇರೆ ರಾಜ್ಯಕ್ಕೆ ನುಸುಳಲೂ ಅವಕಾಶ ಕೊಡುವುದಿಲ್ಲ. ದೇಶದಲ್ಲಿ ಅಕ್ರಮ ವಲಸಿಗರು ಇರಬಾರದು’ ಎಂದು ಶಾ ಹೇಳಿದ್ದಾರೆ. ಅಸ್ಸಾಂನಲ್ಲಿರುವ ಅಕ್ರಮ ವಲಸಿಗರು ಮೇಘಾಲಯಕ್ಕೆ ನುಸುಳಬಹುದು ಎಂದು ಅಲ್ಲಿನ ಮುಖ್ಯಮಂತ್ರಿ ವ್ಯಕ್ತಪಡಿಸಿದ ಆತಂಕಕ್ಕೆ ಶಾ ಹೀಗೆ ಹೇಳಿದ್ದಾರೆ.

.* ಅಸ್ಸಾಂ ಮಾತ್ರವಲ್ಲ, ಇಡೀ ದೇಶವನ್ನು ಅಕ್ರಮ ವಲಸಿಗರಿಂದ ಮುಕ್ತಗೊಳಿಸುತ್ತೇವೆ. ಅದಕ್ಕಾಗಿ ಯೋಜನೆ ಸಿದ್ಧವಾಗಿದೆ. ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇದನ್ನು ಜಾರಿಗೆ ತರತ್ತೇವೆ.

–ಅಮಿತ್‌ ಶಾ, ಕೇಂದ್ರ ಗೃಹ ಸಚಿವ

 

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

26 minutes ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

39 minutes ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

50 minutes ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

2 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

4 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

5 hours ago