ಗುವಾಹಟಿ: ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಪ್ರಕ್ರಿಯೆ ಕೈಗೊಳ್ಳಲು ಸರ್ಕಾರ ಸಜ್ಜಾಗಿದೆ ಎಂಬ ಸುಳಿವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದಾರೆ. ಅಸ್ಸಾಂನಲ್ಲಿನ ಎನ್ಆರ್ಸಿ ಅಂತಿಮ ಪಟ್ಟಿ ಈಗಾಗಲೇ ಪ್ರಕಟವಾಗಿದೆ. ಅದರ ಬೆನ್ನಲ್ಲೇ ಶಾ ಅವರು ಈ ಸುಳಿವು ನೀಡಿದ್ದಾರೆ.
ದೇಶದಾದ್ಯಂತ ಇರುವ ಅಕ್ರಮ ವಲಸಿಗರನ್ನು ಗುರುತಿಸಿ ಅವರನ್ನು ಹೊರಗೆ ಅಟ್ಟಲಾಗುವುದು ಎಂದು ಅವರು ಹೇಳಿದ್ದಾರೆ. ಅಸ್ಸಾಂನ ಎನ್ಆರ್ಸಿ ಅಂತಿಮಪಟ್ಟಿ ಆ. 31ರಂದು ಪ್ರಕಟವಾಗಿದೆ. ಒಟ್ಟು 19 ಲಕ್ಷ ಮಂದಿಯನ್ನು ಪಟ್ಟಿಯಿಂದ ಹೊರಗೆ ಇರಿಸಲಾಗಿದೆ.
ಅಕ್ರಮ ವಲಸಿಗರು ದೇಶದ ಯಾವುದೇ ಮೂಲೆಯಲ್ಲಿದ್ದರೂ ಗುರುತಿಸಿ ಹೊರದಬ್ಬಲಾಗುವುದು ಎಂದು ಈಶಾನ್ಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದ ಅವರು ಭಾನುವಾರ ಹೇಳಿದ್ದರು. ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ (ಎನ್ಇಡಿಎ) ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ.
‘ಬಹಳಷ್ಟು ಮಂದಿಯ ಹೆಸರು ಎನ್ಆರ್ಸಿಯಿಂದ ಬಿಟ್ಟುಹೋಗಿದೆ ಎಂಬ ಭಾವನೆ ಇದೆ. ಅಕ್ರಮ ವಲಸಿಗರು ಅಸ್ಸಾಂನಲ್ಲಿ ನೆಲೆಸಲು ಬಿಡುವುದಿಲ್ಲ, ಅವರು ಬೇರೆ ರಾಜ್ಯಕ್ಕೆ ನುಸುಳಲೂ ಅವಕಾಶ ಕೊಡುವುದಿಲ್ಲ. ದೇಶದಲ್ಲಿ ಅಕ್ರಮ ವಲಸಿಗರು ಇರಬಾರದು’ ಎಂದು ಶಾ ಹೇಳಿದ್ದಾರೆ. ಅಸ್ಸಾಂನಲ್ಲಿರುವ ಅಕ್ರಮ ವಲಸಿಗರು ಮೇಘಾಲಯಕ್ಕೆ ನುಸುಳಬಹುದು ಎಂದು ಅಲ್ಲಿನ ಮುಖ್ಯಮಂತ್ರಿ ವ್ಯಕ್ತಪಡಿಸಿದ ಆತಂಕಕ್ಕೆ ಶಾ ಹೀಗೆ ಹೇಳಿದ್ದಾರೆ.
.* ಅಸ್ಸಾಂ ಮಾತ್ರವಲ್ಲ, ಇಡೀ ದೇಶವನ್ನು ಅಕ್ರಮ ವಲಸಿಗರಿಂದ ಮುಕ್ತಗೊಳಿಸುತ್ತೇವೆ. ಅದಕ್ಕಾಗಿ ಯೋಜನೆ ಸಿದ್ಧವಾಗಿದೆ. ಎಲ್ಲ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇದನ್ನು ಜಾರಿಗೆ ತರತ್ತೇವೆ.
–ಅಮಿತ್ ಶಾ, ಕೇಂದ್ರ ಗೃಹ ಸಚಿವ
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…