Featured

ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟ : 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು -Vishwanews24

ನವದೆಹಲಿ : ಇಂದು ಕೇಂದ್ರ ಸರ್ಕಾರ ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, 3,11,21,004 ಅಸ್ಸಾಂ ಅಧಿಕೃತ ನಾಗರಿಕರಾಗಿದ್ದು, 19 ಲಕ್ಷ 6,657 ಜನ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದ್ದು, 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ಎಂದು ಕೇಂದ್ರ ಗೃಹ ಇಲಾಖೆಯಿಂದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಅಸ್ಸಾಂ ರಾಜ್ಯ ನೆರೆಯ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿದೆ.

ಹೀಗಾಗಿ ಇಲ್ಲಿ ಬಾಂಗ್ಲಾದೇಶದವರು ಅಕ್ರಮವಾಗಿ ನೆಲೆಸಿದ್ದಾರೆ. ಅಕ್ರಮ ವಲಸಿಗರಿಂದ ಇಲ್ಲಿ ಹೆಚ್ಚಿನ ಹಿಂಸಾಚಾರ, ಗಲಭೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸುಪ್ರೀಂಕೋರ್ಟ್ ನಿಗಾದಲ್ಲಿ ಅಸ್ಸಾಂನಲ್ಲಿ ಮಾತ್ರ ಎನ್ ಆರ್ ಸಿ ನೋಂದಣಿ ಕಾರ್ಯ ನಡೆಸಿತ್ತು. ಇನ್ನು ಎನ್ ಆರ್ ಸಿ ಪಟ್ಟಿಯಲ್ಲಿ ಸೇರ್ಪಡೆಯಾಗದ್ದವರನ್ನು ಗಡೀಪಾರು ಮಾಡುವ ಸಂಭವವಿದೆ ಎನ್ನಲಾಗಿದೆ.

ಇಂದು ಅಧಿಕೃತವಾಗಿ ಅಸ್ಸಾಂ ಸರಕಾರ ಬಿಡುಗಡೆಗೊಳಿಸಿದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಒಟ್ಟು 3,11, 21,004 ಮಂದಿ ಅಸ್ಸಾಂ ಪೌರತ್ವ ಪಡೆದಿದ್ದು, 19,06, 657 ಮಂದಿಯನ್ನು ಪಟ್ಟಿಯಿಂದ ಹೊರಗಿಟ್ಟಿದೆ. ಇವರೆಲ್ಲಾ ತಾವು ಅಸ್ಸಾಂ ನಿವಾಸಿಗಳೆಂಬ ಬಗ್ಗೆ ಯಾವುದೇ ದಾಖಲೆ ಸಲ್ಲಿಸಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago