Featured

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣ ಪ್ರಮಾಣದ ತರಗತಿ -Vishwanews24

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣ ಪ್ರಮಾಣದ ತರಗತಿ -Vishwanews24

ಬೆಂಗಳೂರು: ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್‌ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಶುಕ್ರವಾರ ಕೋವಿಡ್‌ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುವುದು. ಶನಿವಾರ ಮತ್ತು ಭಾನುವಾರ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು. ದೃಢಪ್ರಮಾಣ ದರ ಶೇ 1ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಿರುವಂತೆ ದಿನ ಬಿಟ್ಟು ದಿನ ಅರ್ಧದಷ್ಟು ವಿದ್ಯಾರ್ಥಿಗಳಿಗೆ ಸರದಿಯ ಮೇಲೆ ತರಗತಿಗಳು ನಡೆಯಲಿವೆ’ ಎಂದರು.

ಪಬ್‌ ಆರಂಭಕ್ಕೂ ಒಪ್ಪಿಗೆ: ಅ.3ರಿಂದ ಪಬ್‌ಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಚಿತ್ರಮಂದಿರಗಳಿಗೆ ಅನ್ವಯವಾಗುವ ಮಾರ್ಗಸೂಚಿಗಳು ಪಬ್‌ಗಳಿಗೂ ಅನ್ವಯವಾಗುತ್ತವೆ ಎಂದು ಮುಖ್ಯಮಂತ್ರಿ ಪ್ರಕಟಿಸಿದರು. ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಹೇಳಿದರು. ಯಾದಗಿರಿ, ರಾಯಚೂರು, ಕಲಬುರ್ಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ಹೆಚ್ಚಿಸ ಲಾಗುವುದು. ಅಂತರ ರಾಜ್ಯ ಗಡಿ ಭಾಗದ ಜಿಲ್ಲೆಗಳಲ್ಲಿ ನಿಗಾ ವಹಿಸಲಾಗುವುದು ಎಂದರು.

ರಾತ್ರಿ ಕರ್ಫ್ಯೂ ಸಡಿಲ: ರಾತ್ರಿ ಕರ್ಫ್ಯೂ ಅವಧಿಯನ್ನು ಇನ್ನೂ ಒಂದು ಗಂಟೆ ಸಡಿಲಿಕೆ ಮಾಡಲಾಗಿದೆ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಬೊಮ್ಮಾಯಿ ಹೇಳಿದರು. ಚಿತ್ರಮಂದಿರ ಶೇ 100ರಷ್ಟು ಆಸನ ಭರ್ತಿಗೆ ಅನುಮತಿ: ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅ. 1ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌, ರಂಗಮಂದಿರ, ಸಭಾಂಗಣಗಳಲ್ಲಿ ಪೂರ್ಣ ಪ್ರಮಾಣದ ಆಸನಗಳನ್ನು ಭರ್ತಿಮಾಡಲು ಅನುಮತಿ ನೀಡಲಾಗಿದೆ.

ಕೋವಿಡ್‌ ದೃಢಪ್ರಮಾಣ ದರ ಶೇ1ಕ್ಕಿಂತ ಹೆಚ್ಚಿದ್ದರೆ ಈಗ ಇರುವಂತೆ ಶೇ50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು. ಶೇ2 ಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದರೆ ಚಿತ್ರಮಂದಿರಗಳನ್ನು ಬಂದ್‌ ಮಾಡಬೇಕು ಎಂದು ಬೊಮ್ಮಾಯಿ ತಿಳಿಸಿದರು. ಗರ್ಭಿಣಿಯರು ಮತ್ತು ಹಿರಿಯ ನಾಗರಿಕರು ಚಿತ್ರಮಂದಿರಗಳಿಗೆ ಬರಬಾರದು. ಚಿತ್ರಮಂದಿರದ ಪ್ರವೇಶ ದ್ವಾರದಲ್ಲಿ ದೇಹದ ಉಷ್ಣಾಂಶ ತಪಾಸಣೆ ನಡೆಸಬೇಕು. ಪ್ರತಿ ಪ್ರದರ್ಶನದ ಬಳಿಕ ಶೌಚಾಲಯಗಳೂ ಸೇರಿದಂತೆ ಇಡೀ ಚಿತ್ರಮಂದಿರವನ್ನು ಸ್ವಚ್ಛಗೊಳಿಸಬೇಕು ಎಂದು ಶುಕ್ರವಾರ ಹೊರಡಿಸಿರುವ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

6 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

7 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

9 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

9 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

9 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

9 hours ago