Featured

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣ ಪ್ರಮಾಣದ ತರಗತಿ -Vishwanews24

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಪೂರ್ಣ ಪ್ರಮಾಣದ ತರಗತಿ -Vishwanews24

ಬೆಂಗಳೂರು: ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್‌ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ.

ಶುಕ್ರವಾರ ಕೋವಿಡ್‌ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು ವಿದ್ಯಾರ್ಥಿಗಳಿಗೆ ತರಗತಿ ನಡೆಸಲಾಗುವುದು. ಶನಿವಾರ ಮತ್ತು ಭಾನುವಾರ ತರಗತಿ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗುವುದು. ದೃಢಪ್ರಮಾಣ ದರ ಶೇ 1ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಿರುವಂತೆ ದಿನ ಬಿಟ್ಟು ದಿನ ಅರ್ಧದಷ್ಟು ವಿದ್ಯಾರ್ಥಿಗಳಿಗೆ ಸರದಿಯ ಮೇಲೆ ತರಗತಿಗಳು ನಡೆಯಲಿವೆ’ ಎಂದರು.

ಪಬ್‌ ಆರಂಭಕ್ಕೂ ಒಪ್ಪಿಗೆ: ಅ.3ರಿಂದ ಪಬ್‌ಗಳ ಆರಂಭಕ್ಕೆ ಅನುಮತಿ ನೀಡಲಾಗಿದೆ. ಚಿತ್ರಮಂದಿರಗಳಿಗೆ ಅನ್ವಯವಾಗುವ ಮಾರ್ಗಸೂಚಿಗಳು ಪಬ್‌ಗಳಿಗೂ ಅನ್ವಯವಾಗುತ್ತವೆ ಎಂದು ಮುಖ್ಯಮಂತ್ರಿ ಪ್ರಕಟಿಸಿದರು. ದಸರಾ ಹಬ್ಬಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಸಂಬಂಧಿಸಿದಂತೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ಹೇಳಿದರು. ಯಾದಗಿರಿ, ರಾಯಚೂರು, ಕಲಬುರ್ಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಕೋವಿಡ್‌ ಲಸಿಕೆ ನೀಡುವುದನ್ನು ಹೆಚ್ಚಿಸ ಲಾಗುವುದು. ಅಂತರ ರಾಜ್ಯ ಗಡಿ ಭಾಗದ ಜಿಲ್ಲೆಗಳಲ್ಲಿ ನಿಗಾ ವಹಿಸಲಾಗುವುದು ಎಂದರು.

ರಾತ್ರಿ ಕರ್ಫ್ಯೂ ಸಡಿಲ: ರಾತ್ರಿ ಕರ್ಫ್ಯೂ ಅವಧಿಯನ್ನು ಇನ್ನೂ ಒಂದು ಗಂಟೆ ಸಡಿಲಿಕೆ ಮಾಡಲಾಗಿದೆ. ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಬೊಮ್ಮಾಯಿ ಹೇಳಿದರು. ಚಿತ್ರಮಂದಿರ ಶೇ 100ರಷ್ಟು ಆಸನ ಭರ್ತಿಗೆ ಅನುಮತಿ: ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅ. 1ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌, ರಂಗಮಂದಿರ, ಸಭಾಂಗಣಗಳಲ್ಲಿ ಪೂರ್ಣ ಪ್ರಮಾಣದ ಆಸನಗಳನ್ನು ಭರ್ತಿಮಾಡಲು ಅನುಮತಿ ನೀಡಲಾಗಿದೆ.

ಕೋವಿಡ್‌ ದೃಢಪ್ರಮಾಣ ದರ ಶೇ1ಕ್ಕಿಂತ ಹೆಚ್ಚಿದ್ದರೆ ಈಗ ಇರುವಂತೆ ಶೇ50ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಬೇಕು. ಶೇ2 ಕ್ಕಿಂತ ಹೆಚ್ಚು ಪ್ರಕರಣ ಕಂಡುಬಂದರೆ ಚಿತ್ರಮಂದಿರಗಳನ್ನು ಬಂದ್‌ ಮಾಡಬೇಕು ಎಂದು ಬೊಮ್ಮಾಯಿ ತಿಳಿಸಿದರು. ಗರ್ಭಿಣಿಯರು ಮತ್ತು ಹಿರಿಯ ನಾಗರಿಕರು ಚಿತ್ರಮಂದಿರಗಳಿಗೆ ಬರಬಾರದು. ಚಿತ್ರಮಂದಿರದ ಪ್ರವೇಶ ದ್ವಾರದಲ್ಲಿ ದೇಹದ ಉಷ್ಣಾಂಶ ತಪಾಸಣೆ ನಡೆಸಬೇಕು. ಪ್ರತಿ ಪ್ರದರ್ಶನದ ಬಳಿಕ ಶೌಚಾಲಯಗಳೂ ಸೇರಿದಂತೆ ಇಡೀ ಚಿತ್ರಮಂದಿರವನ್ನು ಸ್ವಚ್ಛಗೊಳಿಸಬೇಕು ಎಂದು ಶುಕ್ರವಾರ ಹೊರಡಿಸಿರುವ ಕೋವಿಡ್‌ ನಿಯಂತ್ರಣ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

14 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

14 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

15 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

18 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

18 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

18 hours ago