Featured

ಅ.11ರಂದು ಕಾಪುವಿನಲ್ಲಿ ಬೃಹತ್ ಉದ್ಯೋಗ ಮೇಳ: ವಿನಯ್ ಕುಮಾರ್ ಸೊರಕೆ – vishwanews24

ಅ.11ರಂದು ಕಾಪುವಿನಲ್ಲಿ ಬೃಹತ್ ಉದ್ಯೋಗ ಮೇಳ: ವಿನಯ್ ಕುಮಾರ್ ಸೊರಕೆ

ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ “ಉಚಿತ ಬೃಹತ್ ಉದ್ಯೋಗ ಮೇಳವು ಕಾಪು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.11ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 3ರ ವರೆಗೆ ನಡೆಯಲಿದೆ ಎಂದು ಉದ್ಯೋಗ ಮೇಳದ ರೂವಾರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತಿಳಿಸಿದರು.

ನಿರುದ್ಯೋಗಿ ಯುವಕ, ಯುವತಿಯರಿಗಾಗಿ ರಾಜ್ಯ ಹಾಗೂ ಸ್ಥಳೀಯ ಸುಮಾರು 50ಕ್ಕಿಂತ ಹೆಚ್ಚಿನ ಪ್ರತಿಷ್ಟಿತ ಕಂಪೆನಿಗಳು, ಸೌದಿಯ ಹೊಟೇಲ್ ಉದ್ಯಮವೂ ಭಾಗವಹಿಸಲಿದೆ. ಸೌದಿಯ ಹೊಟೇಲ್‍ಗೆ 350ಕ್ಕೂ ಅಧಿಕ ಉದ್ಯೋಗಿಗಳ ಅವಶ್ಯಕತೆ ಇದ್ದು, ಇಲ್ಲಿ ನೇಮಕಾತಿ ನಡೆಯಲಿದೆ. ಇದೊಂದು ಜಿಲ್ಲಾ ಮಟ್ಟದ ಮೇಳವಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಪದವಿಪೂರ್ವ ಕಾಲೇಜಿನ ಮತ್ತು ಪದವಿ ಕಾಲೇಜು, ಐಟಿಐ, ಸ್ನಾತಕೋತ್ತರ ಪದವಿ, ಎಂ.ಬಿ.ಎ. ಇಂಜಿನಿಯರಿಂಗ್, ಇನ್ನಿತರ ಶೈಕ್ಷಣಿಕ ಅರ್ಹತೆ ಪಡೆದ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದರು.

ಹತ್ತು ಸಾವಿರ ಉದ್ಯೋಗವಕಾಶ: ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ 45 ವಯೋಮಾನದವರೆಗೆ ಉದ್ಯೋಗವಕಾಶಗಳಿವೆ. ಐಟಿ ಬಿಟಿ, ಆಟೋಮೊಬೈಲ್ ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕ್ ಲೋನ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೆಜ್ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನಸಿರ್ಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಉದ್ಯೋಗ ಲಭಿಸಲಿದೆ.

ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 10 ಸ್ವವಿವರರಗಳನ್ನು ತರತಕ್ಕದ್ದು, ಒಬ್ಬರಿಗೆ 10 ಸಂಸ್ಥೆಗಳಿಗೂ ಸ್ವವಿವರ ಸಲ್ಲಿಸಬಹುದು. ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ನೀಡಲಾಗುವುದು ಅಲ್ಲದೆ ಯಾವ ಕಂಪೆನಿಯಲ್ಲಿ ಉದ್ಯೋಗ ಬಯಸುತ್ತಾರೊ ಅದನ್ನು ಪಡೆಯಲು ಅವಕಾಶವಿದ್ದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾಯ ಕಂಪೆನಿಗಳು ಕಾರ್ಯಕ್ರಮದ ದಿನದಂದೇ ನೇಮಕಾತಿ ಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಚಾರ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ್ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಕುಮಾರ್, ಪ್ರಹರೀಶ್ ಕಿಣಿ, ಜಿತೇಂದ್ರ ಪುಟಾರ್ಡೋ, ಕಾಪು ದಿವಾಕರ ಶೆಟ್ಟಿ, ಡಾ.ಸಂತೋಷ್ ಕುಮಾರ್, ಉಪಸ್ಥಿತರಿದ್ದರು.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

1 hour ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

1 hour ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

1 hour ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

2 hours ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago