ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ “ಉಚಿತ ಬೃಹತ್ ಉದ್ಯೋಗ ಮೇಳವು ಕಾಪು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.11ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 3ರ ವರೆಗೆ ನಡೆಯಲಿದೆ ಎಂದು ಉದ್ಯೋಗ ಮೇಳದ ರೂವಾರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ತಿಳಿಸಿದರು.
ನಿರುದ್ಯೋಗಿ ಯುವಕ, ಯುವತಿಯರಿಗಾಗಿ ರಾಜ್ಯ ಹಾಗೂ ಸ್ಥಳೀಯ ಸುಮಾರು 50ಕ್ಕಿಂತ ಹೆಚ್ಚಿನ ಪ್ರತಿಷ್ಟಿತ ಕಂಪೆನಿಗಳು, ಸೌದಿಯ ಹೊಟೇಲ್ ಉದ್ಯಮವೂ ಭಾಗವಹಿಸಲಿದೆ. ಸೌದಿಯ ಹೊಟೇಲ್ಗೆ 350ಕ್ಕೂ ಅಧಿಕ ಉದ್ಯೋಗಿಗಳ ಅವಶ್ಯಕತೆ ಇದ್ದು, ಇಲ್ಲಿ ನೇಮಕಾತಿ ನಡೆಯಲಿದೆ. ಇದೊಂದು ಜಿಲ್ಲಾ ಮಟ್ಟದ ಮೇಳವಾಗಿದ್ದು, ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ, ಪದವಿಪೂರ್ವ ಕಾಲೇಜಿನ ಮತ್ತು ಪದವಿ ಕಾಲೇಜು, ಐಟಿಐ, ಸ್ನಾತಕೋತ್ತರ ಪದವಿ, ಎಂ.ಬಿ.ಎ. ಇಂಜಿನಿಯರಿಂಗ್, ಇನ್ನಿತರ ಶೈಕ್ಷಣಿಕ ಅರ್ಹತೆ ಪಡೆದ ಉದ್ಯೋಗಾಕಾಂಕ್ಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದರು.
ಹತ್ತು ಸಾವಿರ ಉದ್ಯೋಗವಕಾಶ: ಇಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ 45 ವಯೋಮಾನದವರೆಗೆ ಉದ್ಯೋಗವಕಾಶಗಳಿವೆ. ಐಟಿ ಬಿಟಿ, ಆಟೋಮೊಬೈಲ್ ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕ್ ಲೋನ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೆಜ್ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನಸಿರ್ಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಉದ್ಯೋಗ ಲಭಿಸಲಿದೆ.
ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 10 ಸ್ವವಿವರರಗಳನ್ನು ತರತಕ್ಕದ್ದು, ಒಬ್ಬರಿಗೆ 10 ಸಂಸ್ಥೆಗಳಿಗೂ ಸ್ವವಿವರ ಸಲ್ಲಿಸಬಹುದು. ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ನೀಡಲಾಗುವುದು ಅಲ್ಲದೆ ಯಾವ ಕಂಪೆನಿಯಲ್ಲಿ ಉದ್ಯೋಗ ಬಯಸುತ್ತಾರೊ ಅದನ್ನು ಪಡೆಯಲು ಅವಕಾಶವಿದ್ದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾಯ ಕಂಪೆನಿಗಳು ಕಾರ್ಯಕ್ರಮದ ದಿನದಂದೇ ನೇಮಕಾತಿ ಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಚಾರ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ್ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಕುಮಾರ್, ಪ್ರಹರೀಶ್ ಕಿಣಿ, ಜಿತೇಂದ್ರ ಪುಟಾರ್ಡೋ, ಕಾಪು ದಿವಾಕರ ಶೆಟ್ಟಿ, ಡಾ.ಸಂತೋಷ್ ಕುಮಾರ್, ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…