ಬೆಂಗಳೂರು: ಒಂದರಿಂದ ಐದನೇ ತರಗತಿ ಅಕ್ಟೋಬರ್ 25 ರಿಂದ ಆರಂಭಿಸಲಾಗುತ್ತಿದ್ದು, ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಅಕ್ಟೋಬರ್ 25 ರಿಂದ 30 ರವರೆಗೆ ಮಾತ್ರ ಅರ್ಧ ದಿನ ತರಗತಿಗಳು ನಡೆಯಲಿದ್ದು, ನವೆಂಬರ್ 2 ರಿಂದ ಪೂರ್ಣಾವಧಿ ತರಗತಿಗಳನ್ನು ನಡೆಸಲಾಗುವುದು. ಮಕ್ಕಳು ಶಾಲೆಗೆ ಬರಲು ಪೋಷಕ ಒಪ್ಪಿಗೆ ಕಡ್ಡಾಯವಾಗಿದ್ದು, ಅಕ್ಟೋಬರ್ 30ರ ವರೆಗೂ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನವೆಂಬರ್ 2 ರಿಂದ ಶಾಲೆಗಳಲ್ಲಿ ಬಿಸಿಯೂಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದೆ.
ಇನ್ನು ಎಲ್ಲಾ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕೊಠಡಿಯಲ್ಲಿ 15 ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಬೇಕು. ಶಾಲೆಯಲ್ಲಿ ಮಕ್ಕಳಿಗೆ ತಪಾಸಣೆ ನಡೆಸಬೇಕು ಎಂದು ಹೇಳಿದೆ.
ಮಕ್ಕಳಿಗೆ ಗೇಟ್ ಬಳಿ ಕೊರೊನಾ ತಪಾಸಣೆ ನಡೆಸಬೇಕು. ಕೊರೊನಾ ಕಂಡು ಬಂದರೆ ಶಾಲೆ ಸ್ಯಾನಿಟೈಸ್ ಮಾಡಬೇಕು. ಮುಂದಿನ ಆದೇಶದವರೆಗೆ ಎಲ್ಕೆಜಿ-ಯುಕೆಜಿ ಆರಂಭಿಸುವಂತಿಲ್ಲ.ಶಿಕ್ಷಕರು, ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…