ಬೆಂಗಳೂರು: ಒಂದರಿಂದ ಐದನೇ ತರಗತಿ ಅಕ್ಟೋಬರ್ 25 ರಿಂದ ಆರಂಭಿಸಲಾಗುತ್ತಿದ್ದು, ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಅಕ್ಟೋಬರ್ 25 ರಿಂದ 30 ರವರೆಗೆ ಮಾತ್ರ ಅರ್ಧ ದಿನ ತರಗತಿಗಳು ನಡೆಯಲಿದ್ದು, ನವೆಂಬರ್ 2 ರಿಂದ ಪೂರ್ಣಾವಧಿ ತರಗತಿಗಳನ್ನು ನಡೆಸಲಾಗುವುದು. ಮಕ್ಕಳು ಶಾಲೆಗೆ ಬರಲು ಪೋಷಕ ಒಪ್ಪಿಗೆ ಕಡ್ಡಾಯವಾಗಿದ್ದು, ಅಕ್ಟೋಬರ್ 30ರ ವರೆಗೂ ಮಧ್ಯಾಹ್ನದ ಬಿಸಿಯೂಟ ಇರುವುದಿಲ್ಲ. ನವೆಂಬರ್ 2 ರಿಂದ ಶಾಲೆಗಳಲ್ಲಿ ಬಿಸಿಯೂಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದೆ.
ಇನ್ನು ಎಲ್ಲಾ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕೊಠಡಿಯಲ್ಲಿ 15 ರಿಂದ 20 ಮಕ್ಕಳ ತಂಡ ರಚಿಸಿ ಪಾಠ ಮಾಡಬೇಕು. ಶಾಲೆಯಲ್ಲಿ ಮಕ್ಕಳಿಗೆ ತಪಾಸಣೆ ನಡೆಸಬೇಕು ಎಂದು ಹೇಳಿದೆ.
ಮಕ್ಕಳಿಗೆ ಗೇಟ್ ಬಳಿ ಕೊರೊನಾ ತಪಾಸಣೆ ನಡೆಸಬೇಕು. ಕೊರೊನಾ ಕಂಡು ಬಂದರೆ ಶಾಲೆ ಸ್ಯಾನಿಟೈಸ್ ಮಾಡಬೇಕು. ಮುಂದಿನ ಆದೇಶದವರೆಗೆ ಎಲ್ಕೆಜಿ-ಯುಕೆಜಿ ಆರಂಭಿಸುವಂತಿಲ್ಲ.ಶಿಕ್ಷಕರು, ಮಕ್ಕಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…