ಮಂಗಳೂರು: ಈ ವರ್ಷದ ದ್ವಿತೀಯ ಹಾಗೂ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28ರಂದು ಸಂಭವಿಸಲಿದೆ. ಅಕ್ಟೋಬರ್ 28ರ ರಾತ್ರಿ ಆರಂಭವಾಗಿ, ಅಕ್ಟೋಬರ್ 29 ರ ಮಧ್ಯರಾತ್ರಿ 2:24 ಕ್ಕೆ ಮುಕ್ತಾಯವಾಗಲಿರುವ ಈ ಭಾಗಶಃ ಚಂದ್ರ ಗ್ರಹಣ ಭಾರತದಲ್ಲೂ ಗೋಚರಿಸುತ್ತದೆ.
ಚಂದ್ರಗ್ರಹಣ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ರಾತ್ರಿಯ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಇರುವುದಿಲ್ಲ, ರಾತ್ರಿಯ ಭೋಜನ ಇರುವುದಿಲ್ಲ.ಸಾಯಂಕಾಲ ಆಶ್ಲೇಷಾ ಬಲಿ ಸೇವೆಯೂ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.
ಕಟೀಲು ದೇವಸ್ಥಾನ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ. ರಾತ್ರಿಯ ಮಹಾಪೂಜೆ ಸಾಯಂಕಾಲ ಆರೂವರೆ ಒಳಗೆ ಮುಗಿಯುತ್ತದೆ. ಗ್ರಹಣದ ಸಮಯ ವಿಶೇಷ ಅಭಿಷೇಕ, ಮಧ್ಯಕಾಲದಲ್ಲಿ ವಿಸೇಷ ಅಭಿಷೇಕ ಇರುತ್ತದೆ. ಗ್ರಹಣ ಸಮಯಕ್ಕೆ ದೇವಿಯ ದರ್ಶನಕ್ಕೆ ತುಪ್ಪ, ಎಣ್ಣೆ ಸಮರ್ಪಣೆಗೆ ಅವಕಾಶ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…