ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್ಗೆ ನೀಡಿರುವ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿದ್ದು, ಈ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಯಾವುದೇ ಬಂದ್ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ತಿಳಿಸಿದೆ. ಈ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ಆದುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕು ಚ್ಯುತಿಗೊಳಿಸುವ ಯಾವುದೇ ರೀತಿಯ ಬಂದ್ಗೆ ಅಥವಾ ಅದಕ್ಕೆ ಸಂಬಂಧಿಸಿದ ಇತರೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…