ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್ಗೆ ನೀಡಿರುವ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿದ್ದು, ಈ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಯಾವುದೇ ಬಂದ್ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ತಿಳಿಸಿದೆ. ಈ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ಆದುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕು ಚ್ಯುತಿಗೊಳಿಸುವ ಯಾವುದೇ ರೀತಿಯ ಬಂದ್ಗೆ ಅಥವಾ ಅದಕ್ಕೆ ಸಂಬಂಧಿಸಿದ ಇತರೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…