Featured

ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ ; ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಚಂಡಿಕಾಯಾಗ – vishwanews24

ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ ; ಉಚ್ಚಿಲ ದೇವಸ್ಥಾನದಲ್ಲಿ ಚಂಡಿಕಾಯಾಗ

ಮಲ್ಪೆ: ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ನ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್‌ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಅ. 5ರಂದು ಜಿಲ್ಲಾ ಮೊಗವೀರ ಯುವ ಸಂಘಟನೆಯ ವಿವಿಧ ಘಟಕ ವ್ಯಾಪ್ತಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಬೈಂದೂರು-ಶಿರೂರು, ಹೆಮ್ಮಾಡಿ, ಕುಂದಾಪುರ ಕೋಟೇಶ್ವರ, ಕೋಟ, ಸಾಲಿಗ್ರಾಮ, ಹಾಲಾಡಿ, ಮಂದಾರ್ತಿ, ಬ್ರಹ್ಮಾವರ, ಕೋಡಿಬೆಂಗ್ರೆ, ಪಡುತೋನ್ಸೆ ಬೆಂಗ್ರೆ, ಹಿರಿಯಡಕ, ಮಲ್ಪೆ, ಉಪ್ಪೂರು, ಬೆಳ್ಳಂಪಳ್ಳಿ, ಉದ್ಯಾವರ, ದೊಡ್ಡಣಗುಡ್ಡೆ ಘಟಕಗಳಲ್ಲಿ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ಧನಸಹಾಯ, ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಹಾಗೂ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಾಗೂ ಊಟದ ವ್ಯವಸ್ಥೆ, ಕಲಿಕಾ ಸಾಮಗ್ರಿ, ದಿನಸಿ ಸಾಮಗ್ರಿ, ಬಡ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದು. ಜತೆಗೆ ಗೋ ಶಾಲೆಗೆ ಮೇವು ಮತ್ತು ಪಶು ಆಹಾರ ನೀಡಲಾಗುವುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್‌ ಅಮೀನ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಚ್ಚಿಲ ದೇವಸ್ಥಾನದಲ್ಲಿ ಚಂಡಿಕಾಯಾಗ
ಡಾ| ಜಿ. ಶಂಕರ್‌ ಹುಟ್ಟುಹಬ್ಬದ ಸಲುವಾಗಿ ಅ. 5ರಂದು ಮಧ್ಯಾಹ್ನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇಗುಲದ ಆಡಳಿತ ಸಮಿತಿ ವತಿಯಿಂದ ಮಧ್ಯಾಹ್ನ ಚಂಡಿಕಾಹೋಮ ಸಹಿತ ವಿಶೇಷ ಪೂಜೆ ನಡೆಯಲಿದೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

6 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago