ಮಲ್ಪೆ: ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಅ. 5ರಂದು ಜಿಲ್ಲಾ ಮೊಗವೀರ ಯುವ ಸಂಘಟನೆಯ ವಿವಿಧ ಘಟಕ ವ್ಯಾಪ್ತಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಬೈಂದೂರು-ಶಿರೂರು, ಹೆಮ್ಮಾಡಿ, ಕುಂದಾಪುರ ಕೋಟೇಶ್ವರ, ಕೋಟ, ಸಾಲಿಗ್ರಾಮ, ಹಾಲಾಡಿ, ಮಂದಾರ್ತಿ, ಬ್ರಹ್ಮಾವರ, ಕೋಡಿಬೆಂಗ್ರೆ, ಪಡುತೋನ್ಸೆ ಬೆಂಗ್ರೆ, ಹಿರಿಯಡಕ, ಮಲ್ಪೆ, ಉಪ್ಪೂರು, ಬೆಳ್ಳಂಪಳ್ಳಿ, ಉದ್ಯಾವರ, ದೊಡ್ಡಣಗುಡ್ಡೆ ಘಟಕಗಳಲ್ಲಿ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ಧನಸಹಾಯ, ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಹಾಗೂ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಾಗೂ ಊಟದ ವ್ಯವಸ್ಥೆ, ಕಲಿಕಾ ಸಾಮಗ್ರಿ, ದಿನಸಿ ಸಾಮಗ್ರಿ, ಬಡ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದು. ಜತೆಗೆ ಗೋ ಶಾಲೆಗೆ ಮೇವು ಮತ್ತು ಪಶು ಆಹಾರ ನೀಡಲಾಗುವುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್ ಅಮೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಚ್ಚಿಲ ದೇವಸ್ಥಾನದಲ್ಲಿ ಚಂಡಿಕಾಯಾಗ
ಡಾ| ಜಿ. ಶಂಕರ್ ಹುಟ್ಟುಹಬ್ಬದ ಸಲುವಾಗಿ ಅ. 5ರಂದು ಮಧ್ಯಾಹ್ನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇಗುಲದ ಆಡಳಿತ ಸಮಿತಿ ವತಿಯಿಂದ ಮಧ್ಯಾಹ್ನ ಚಂಡಿಕಾಹೋಮ ಸಹಿತ ವಿಶೇಷ ಪೂಜೆ ನಡೆಯಲಿದೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…