Featured

ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ ; ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಚಂಡಿಕಾಯಾಗ – vishwanews24

ಅ.5ರಂದು ನಾಡೋಜ ಡಾ| ಜಿ. ಶಂಕರ್‌ 69ನೇ ಹುಟ್ಟುಹಬ್ಬ ; ಉಚ್ಚಿಲ ದೇವಸ್ಥಾನದಲ್ಲಿ ಚಂಡಿಕಾಯಾಗ

ಮಲ್ಪೆ: ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ನ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್‌ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಅ. 5ರಂದು ಜಿಲ್ಲಾ ಮೊಗವೀರ ಯುವ ಸಂಘಟನೆಯ ವಿವಿಧ ಘಟಕ ವ್ಯಾಪ್ತಿಯಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಬೈಂದೂರು-ಶಿರೂರು, ಹೆಮ್ಮಾಡಿ, ಕುಂದಾಪುರ ಕೋಟೇಶ್ವರ, ಕೋಟ, ಸಾಲಿಗ್ರಾಮ, ಹಾಲಾಡಿ, ಮಂದಾರ್ತಿ, ಬ್ರಹ್ಮಾವರ, ಕೋಡಿಬೆಂಗ್ರೆ, ಪಡುತೋನ್ಸೆ ಬೆಂಗ್ರೆ, ಹಿರಿಯಡಕ, ಮಲ್ಪೆ, ಉಪ್ಪೂರು, ಬೆಳ್ಳಂಪಳ್ಳಿ, ಉದ್ಯಾವರ, ದೊಡ್ಡಣಗುಡ್ಡೆ ಘಟಕಗಳಲ್ಲಿ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ಧನಸಹಾಯ, ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಹಾಗೂ ಶಾಲಾ ಮಕ್ಕಳಿಗೆ ಸಿಹಿ ತಿಂಡಿ ಹಾಗೂ ಊಟದ ವ್ಯವಸ್ಥೆ, ಕಲಿಕಾ ಸಾಮಗ್ರಿ, ದಿನಸಿ ಸಾಮಗ್ರಿ, ಬಡ ವಿದ್ಯಾರ್ಥಿಗಳಿಗೆ ಸಹಾಯಧನ ಹಾಗೂ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವುದು. ಜತೆಗೆ ಗೋ ಶಾಲೆಗೆ ಮೇವು ಮತ್ತು ಪಶು ಆಹಾರ ನೀಡಲಾಗುವುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್‌ ಅಮೀನ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಚ್ಚಿಲ ದೇವಸ್ಥಾನದಲ್ಲಿ ಚಂಡಿಕಾಯಾಗ
ಡಾ| ಜಿ. ಶಂಕರ್‌ ಹುಟ್ಟುಹಬ್ಬದ ಸಲುವಾಗಿ ಅ. 5ರಂದು ಮಧ್ಯಾಹ್ನ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ದೇಗುಲದ ಆಡಳಿತ ಸಮಿತಿ ವತಿಯಿಂದ ಮಧ್ಯಾಹ್ನ ಚಂಡಿಕಾಹೋಮ ಸಹಿತ ವಿಶೇಷ ಪೂಜೆ ನಡೆಯಲಿದೆ ಎಂದು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ತಿಳಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

15 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

27 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

42 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago