Featured

ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ : ಈ ಬಾರಿ ವಿಐಪಿ, ವಿವಿಐಪಿ ಪಾಸ್‌ ಸಂಪೂರ್ಣ ರದ್ದು – vishwanews24

ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ : ಈ ಬಾರಿ ವಿಐಪಿ, ವಿವಿಐಪಿ ಪಾಸ್‌ ಸಂಪೂರ್ಣ ರದ್ದು ; ಹೊಸದಾಗಿ ಗೋಲ್ಡ್ ಪಾಸ್ ವಿತರಣೆ

ಹಾಸನ: ಈ ಬಾರಿಯ ಹಾಸನಾಂಬೆ ಜಾತ್ರೆ ಅ.9 ರಿಂದ 23ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ ಮಂಗಳವಾರ (ಆ.26) ಹಾಸನ ಜಿ.ಪಂ ಹೊಯ್ಸಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಿತು. ಈ ವೇಳೆ ದರ್ಶನದ ಪಾಸ್ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರ ನೇತೃತ್ವದಲ್ಲಿ ಶ್ರೀ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆದಿದ್ದು, ಶಾಸಕರುಗಳಾದ ಕೆ.ಎಂ.ಶಿವಲಿಂಗೇಗೌಡ, ಎಚ್.ಪಿ.ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜೇತಾ, ಮೇಯರ್ ಹೇಮಲತಾ ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

2025ರ ಹಾಸನಾಂಬೆ ಜಾತ್ರಾ ಮಹೋತ್ಸವ ಅ.9 ರಿಂದ ಅ.23ರವರೆಗೆ ನಡೆಯಲಿದ್ದು, ಅ.9ರಂದು ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಬಳಿಕ ಅ.23ರಂದು ಗರ್ಭಗುಡಿ ಬಾಗಿಲು ಮುಚ್ಚಲಿದೆ. ಅ.10ರಿಂದ ಅ.22ರವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದುಗೊಳಿಸಿ, ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಮಾಡಲಾಗುವುದು. ಈ ಗೋಲ್ಡ್ ಪಾಸ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಪಡೆಯಬಹುದಾಗಿದೆ. ಒಂದು ಗೋಲ್ಡ್ ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಹೇಳಿದ್ದಾರೆ.

ಇನ್ನೂ ಕೊನೆಯ ಐದು ದಿನ ಎಲ್ಲಾ ಶಿಷ್ಟಾಚಾರ ರದ್ದುಗೊಳಿಸಲಾಗುವುದು, ಸಿಎಂ, ಡಿಸಿಎಂ, ಸಿಜೆ ಮಾತ್ರ ಶಿಷ್ಟಾಚಾರದ ವಾಹನ ಬಳಸಬಹುದು. ಉಳಿದವರು ಪ್ರವಾಸಿ ಮಂದಿರದಲ್ಲಿ ವಾಹನ ನಿಲ್ಲಿಸಿ, ಜಿಲ್ಲಾಡಳಿತ ಆಯೋಜಿಸಿರುವ ವಾಹನದಲ್ಲಿ ಬಂದು ದೇವಿ ದರ್ಶನ ಪಡೆಯಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ವೇಳೆ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ರಾಜ್ಯದ ಎಲ್ಲೆಲ್ಲಿಂದಲೊ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಹಾಗಾಗಿ ಅವರನ್ನು ಗಂಟೆಗಟ್ಟಲೆ ನಿಲ್ಲಿಸಿ ಜನರಿಗೆ ತೊಂದರೆ ಕೊಡೋದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೇನೆ. ಗೋಲ್ಡ್ ಕಾರ್ಡ್ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಿದ್ದೇನೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತದೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

12 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

12 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

13 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

13 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago