Featured

ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ : ಈ ಬಾರಿ ವಿಐಪಿ, ವಿವಿಐಪಿ ಪಾಸ್‌ ಸಂಪೂರ್ಣ ರದ್ದು – vishwanews24

ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ : ಈ ಬಾರಿ ವಿಐಪಿ, ವಿವಿಐಪಿ ಪಾಸ್‌ ಸಂಪೂರ್ಣ ರದ್ದು ; ಹೊಸದಾಗಿ ಗೋಲ್ಡ್ ಪಾಸ್ ವಿತರಣೆ

ಹಾಸನ: ಈ ಬಾರಿಯ ಹಾಸನಾಂಬೆ ಜಾತ್ರೆ ಅ.9 ರಿಂದ 23ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ ಮಂಗಳವಾರ (ಆ.26) ಹಾಸನ ಜಿ.ಪಂ ಹೊಯ್ಸಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಿತು. ಈ ವೇಳೆ ದರ್ಶನದ ಪಾಸ್ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರ ನೇತೃತ್ವದಲ್ಲಿ ಶ್ರೀ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆದಿದ್ದು, ಶಾಸಕರುಗಳಾದ ಕೆ.ಎಂ.ಶಿವಲಿಂಗೇಗೌಡ, ಎಚ್.ಪಿ.ಸ್ವರೂಪ್ ಪ್ರಕಾಶ್, ಸಿಮೆಂಟ್ ಮಂಜು, ಡಿಸಿ ಕೆ.ಎಸ್.ಲತಾಕುಮಾರಿ, ಎಸ್ಪಿ ಮಹಮದ್ ಸುಜೇತಾ, ಮೇಯರ್ ಹೇಮಲತಾ ಹಾಗೂ ಇತರೆ ಅಧಿಕಾರಿಗಳು ಭಾಗಿಯಾಗಿದ್ದರು.

2025ರ ಹಾಸನಾಂಬೆ ಜಾತ್ರಾ ಮಹೋತ್ಸವ ಅ.9 ರಿಂದ ಅ.23ರವರೆಗೆ ನಡೆಯಲಿದ್ದು, ಅ.9ರಂದು ಹಾಸನಾಂಬ ದೇವಿ ಗರ್ಭಗುಡಿ ಬಾಗಿಲು ತೆರೆಯಲಿದೆ. ಬಳಿಕ ಅ.23ರಂದು ಗರ್ಭಗುಡಿ ಬಾಗಿಲು ಮುಚ್ಚಲಿದೆ. ಅ.10ರಿಂದ ಅ.22ರವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳು ಸಂಪೂರ್ಣ ರದ್ದುಗೊಳಿಸಿ, ಹೊಸದಾಗಿ ಗೋಲ್ಡ್ ಪಾಸ್ ವಿತರಣೆ ಮಾಡಲಾಗುವುದು. ಈ ಗೋಲ್ಡ್ ಪಾಸ್ ಪಡೆದರೆ ಮುಂಜಾನೆ 5 ರಿಂದ 11 ಗಂಟೆಯವರೆಗೆ ದರ್ಶನ ಪಡೆಯಬಹುದಾಗಿದೆ. ಒಂದು ಗೋಲ್ಡ್ ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಉಪವಿಭಾಗಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಮಾರುತಿ ಅವರು ಹೇಳಿದ್ದಾರೆ.

ಇನ್ನೂ ಕೊನೆಯ ಐದು ದಿನ ಎಲ್ಲಾ ಶಿಷ್ಟಾಚಾರ ರದ್ದುಗೊಳಿಸಲಾಗುವುದು, ಸಿಎಂ, ಡಿಸಿಎಂ, ಸಿಜೆ ಮಾತ್ರ ಶಿಷ್ಟಾಚಾರದ ವಾಹನ ಬಳಸಬಹುದು. ಉಳಿದವರು ಪ್ರವಾಸಿ ಮಂದಿರದಲ್ಲಿ ವಾಹನ ನಿಲ್ಲಿಸಿ, ಜಿಲ್ಲಾಡಳಿತ ಆಯೋಜಿಸಿರುವ ವಾಹನದಲ್ಲಿ ಬಂದು ದೇವಿ ದರ್ಶನ ಪಡೆಯಲು ಅವಕಾಶವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ವೇಳೆ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ರಾಜ್ಯದ ಎಲ್ಲೆಲ್ಲಿಂದಲೊ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಹಾಗಾಗಿ ಅವರನ್ನು ಗಂಟೆಗಟ್ಟಲೆ ನಿಲ್ಲಿಸಿ ಜನರಿಗೆ ತೊಂದರೆ ಕೊಡೋದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಳ್ಳುತ್ತೇನೆ. ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೇನೆ. ಗೋಲ್ಡ್ ಕಾರ್ಡ್ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಿದ್ದೇನೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತದೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ತಿಳಿಸಿದ್ದಾರೆ.

Vishwa News 24

Recent Posts

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

7 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

25 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

30 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

37 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು – vishwanews24

ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…

1 hour ago