ಹೈದರಾಬಾದ್: ಆಂಧ್ರಪ್ರದೇಶದನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮಂತ್ರಿಯಾಗಿ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಪ್ರಮಾಣವಚನ ಬೋಧಿಸಿದರು. ಒಟ್ಟು 23 ಮಂದಿ ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ , ಗೃಹ ಸಚಿವ ಅಮಿತ್ ಶಾ, ನಟ ರಜನಿಕಾಂತ್, ಪವನ್ ಕಲ್ಯಾಣ್ ಸಹೋದರ ಚಿರಂಜೀವಿ ಸೇರಿದಂತೆ ಸಿನಿಮಾ ತಾರೆಯರು, ಎನ್ಡಿಎ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಚಂದ್ರಬಾಬು ನಾಯ್ಡು ಅವರು 1995 ರಿಂದ 1999, 2004 ರಿಂದ 2009 ಹಾಗೂ 2014ರಿಂದ 2019ರ ವರೆಗೆ ಒಟ್ಟು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 2019ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಪಕ್ಷ ಸೋಲು ಕಂಡಿತ್ತು ಜಗನ್ ನೇತೃತ್ವದ ಸರ್ಕಾರ ಅಧಿಕಾರ ಏರಿತ್ತು.
ಆಂಧ್ರಪ್ರದೇಶದಲ್ಲಿ ಮೇ 13ರಂದು ಲೋಕಸಭಾ ಚುನಾವಣೆಯ ಜೊತೆಯಲ್ಲೇ ವಿಧಾನಸಭೆಗೂ ಮತದಾನ ನಡೆದಿತ್ತು. ಈ ಚುನಾವಣೆಗೆ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡಿದ್ದವು.
ವಿಧಾನಸಭೆಯ 175 ಸ್ಥಾನಗಳ ಪೈಕಿ ಟಿಡಿಪಿ 135, ಜನಸೇನಾ 21, ಬಿಜೆಪಿ 8 ಹಾಗೂ ವೈಎಸ್ಆರ್ಸಿಪಿ 11 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. 25 ಲೋಕಸಭಾ ಕ್ಷೇತ್ರಗಳ ಪೈಕಿ ಟಿಡಿಪಿ 16, ವೈಎಸ್ಆರ್ಸಿಪಿ 4, ಬಿಜೆಪಿ 3, ಜನಸೇನಾ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…