ಹೈದರಾಬಾದ್ : ಆಂಧ್ರಪ್ರದೇಶದ ಗುಂಟೂರಿನ ಜಿನ್ನಾ ಟವರ್ ವಿವಾದದ ನಡುವೆಯೇ ಆಂಧ್ರಪ್ರದೇಶದ ಗುಂಟೂರಿನ ಜಿನ್ನಾ ಟವರ್ ಗೆ ತ್ರಿವರ್ಣ ಬಣ್ಣ ಬಳಿಯಲಾಗಿದೆ. ಇಲ್ಲಿ ಶೀಘ್ರದಲ್ಲೇ ರಾಷ್ಟ್ರಧ್ವಜ ಹಾರಿಸಲಾಗುವುದು. ಜನವರಿಯಲ್ಲಿ ಕೆಲವರು ಜಿನ್ನಾ ಟವರ್ ಗೆ ಪ್ರವೇಶಿಸಿದ್ದರು. ಬಳಿಕ ಇಲ್ಲಿ ತ್ರಿವರ್ಣ ಧ್ವಜ ಹಾರಿಸಿದ ವಿಚಾರ ಕಾವು ಪಡೆದಿತ್ತು. ಗುಂಟೂರಿನ ಮಾಜಿ ಶಾಸಕ ಮೊಹಮ್ಮದ್ ಮುಸ್ತಫಾ ಇದಕ್ಕೆ ತ್ರಿವರ್ಣ ಧ್ವಜದ ಬಣ್ಣ ಬಳಿದಿದ್ದರು. ಈ ನಿಟ್ಟಿನಲ್ಲಿ ಹಲವು ಸಂಘಟನೆಗಳು ಮುಂದೆ ಬಂದಿದ್ದವು ಹೀಗಾಗಿ ಗೋಪುರಕ್ಕೆ ಬಣ್ಣ ಬಳಿಯಲು ನಿರ್ಧರಿಸಲಾಯಿತು. ತ್ರಿವರ್ಣ ಧ್ವಜದ ಬಣ್ಣದಿಂದ ಸಿಂಗರಿಸಿ, ಈ ಗೋಪುರದ ಮೇಲೆ ಕಂಬವನ್ನು ಸ್ಥಾಪಿಸಲಾಗಿದೆ, ಫೆಬ್ರವರಿ 3 ರಂದು ಅದರ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ.
ಜನವರಿ 26 ರಂದು ಅಂದರೆ ಗಣರಾಜ್ಯೋತ್ಸವದಂದು ತ್ರಿವರ್ಣ ಧ್ವಜವನ್ನು ಹಾರಿಸಲು ಕೆಲವರು ಜಿನ್ನಾ ಗೋಪುರವನ್ನು ಪ್ರವೇಶಿಸಿದ್ದರು. ಆದರೆ, ವಿವಾದ ತಡೆಯಲು ಪೊಲೀಸರು ಅವರನ್ನು ಬಂಧಿಸಿದ್ದರು. ಬಿಜೆಪಿಯ ಆಂಧ್ರಪ್ರದೇಶ ಘಟಕವು ಈ ಬಗ್ಗೆ ಕಳೆದ ವರ್ಷ ಡಿಸೆಂಬರ್ನಲ್ಲಿ ಗುಂಟೂರು ಮಹಾನಗರ ಪಾಲಿಕೆ ಆಯುಕ್ತ ಚಲ್ಲಾ ಅನುರಾಧ ಅವರಿಗೆ ಮನವಿ ಸಲ್ಲಿಸಿತ್ತು. ಇದರಲ್ಲಿ ಗೋಪುರಕ್ಕೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹೆಸರಿಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.
ಇದನ್ನೂ ಓದಿ :
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…